ವಾಲ್ಮೀಕಿ ಸಮಾಜದ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳದ ಆರೋಪ

ಆಕೆ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಳು. ಗಂಡನ ಜೊತೆಗೆ ನೆಮ್ಮದಿಯಾಗಿ ಇರಬೇಕು ಎಂದು ಒಂದು ಸೈಟ್ ಕೊಂಡುಕೊಳ್ಳಲು‌ ಮುಂದಾಗಿದ್ದಾಳೆ. ಈ ವೇಳೆ ಸೈಟ್ ಕೊಳ್ಳಲು ಓರ್ವ ಸ್ವಾಮೀಜಿಯನ್ನ ಮಧ್ಯಸ್ಥಿಕೆಗೆ ಕರೆದಿದ್ದಾಳೆ. ಇವರಿಬ್ಬರ ಮಧ್ಯೆ ಹಣದ ವಿಚಾರಕ್ಕೆ ಮನಃಸ್ತಾಪ ಉಂಟಾಗಿ ಈಗ ಸ್ವಾಮೀಜಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪ ಮಾಡಿದ್ದಾಳೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……………

ಹೌದು ಹೀಗೆ ದಾಖಲೆಗಳನ್ನ ತೋರಿಸುತ್ತಿರುವ ಸ್ವಾಮೀಜಿ, ನಮ್ಮ ಸ್ವಾಮೀಜಿ ಅಂಥವರಲ್ಲ ಎಂದು ಆಕ್ರೋಶ ಹೊರ ಹಾಕುತ್ತಿರುವ ಭಕ್ತಾಧಿಗಳು, ನನ್ನ ಹೆಂಡತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡುತ್ತಿರುವ ಗಂಡ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆ ಬಳಿ.

ಹೌದು ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು, ತನಗೆ ಲೈಗಿಂಕ‌ ಕಿರುಕುಳ‌ ನೀಡುತ್ತಿದ್ದಾರೆ ಎಂದು ಸೆಲ್ಫಿ ವಿಡಿಯೋ ಮಾಡಿ ಆರೋಪ ಮಾಡಿದ್ದಾಳೆ‌. ಐದು ಸಾವಿರ ಹಣ ಕೇಳಿದರೆ ರೂಂ ಗೆ ಬಾ, ಆಮೇಲೆ ಹಣ ಕೊಡುತ್ತೇನೆ ಎಂದು ಸ್ವಾಮೀಜಿ ಕರೆಯುತ್ತಿದ್ದಾನೆ, ಪ್ರತಿನಿತ್ಯ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನೆ. ಮಹಿಳೆ ಒಂಟಿಯಾಗಿದ್ದಾಗ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದಾನೆ ಹಾಗಾಗಿ ನನಗೆ ಆದ ರೀತಿ ಯಾವ ಮಹಿಳೆಗೂ ಆಗುವುದು ಬೇಡ, ನನಗೆ ನ್ಯಾಯ ಬೇಕು ಎಂದು ಮಹಿಳೆ ಆರೋಪಿಸಿ ವಿಡಿಯೋ ಹರಿ ಬಿಟ್ಟಿದ್ದಾಳೆ.

ಇನ್ನೂ ಈ ರೀತಿ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿಯ ಹೆಸರು ಬ್ರಹ್ಮಾನಂದ ಗುರೂಜಿ ಅಂತ. ಈ ವಿಚಾರವಾಗಿ ಈತ ಹೇಳುವ ಮಾತೇ ಬೇರೆ. ಮಹಿಳೆ ಗಂಡ ನನಗೆ ಬಹಳ ಪರಿಚಯ. ಹಾಗಾಗಿ ಅವರು ನಮ್ಮ ಬಳಿ ಬಂದು ಒಂದು ಸೈಟ್ ಕೊಡಿಸುವುದಾಗಿ ಕೇಳಿಕೊಂಡರು. ಆಗ ನನಗೆ ಪರಿಚಯ ಇದ್ದ ಒಬ್ಬರ ಬಳಿ 11 ಲಕ್ಷಕ್ಕೆ ಸೈಟ್ ಕೊಡಿಸಿದ್ದ. ಅದು ಕೆಲವೇ ದಿನಗಳಲ್ಲಿ ಸೈಟ್ ಇ ಖಾತೆ ಮಾಡುವುದನ್ನ ಸರಕಾರ ನಿಲ್ಲಿಸಿತು. ಆಗ ಅವರ ಹಣವನ್ನ ವಾಪಸ್ ನೀಡಿದ್ದೇವೆ. ಈ ವೇಳೆ ಮಹಿಳೆ ನನ್ನ ಜೊತೆ ಸಲುಗೆಯಿಂದ ಮಾತ‌ನಾಡಲು ಮುಂದಾದಳು. ಆಗ ನಾನು ಅವರ ನಂಬರ್ ಬ್ಲಾಕ್ ಮಾಡಿದೆ. ನಂತರ ಕೂಡ ಬೇರೆ ಬೇರೆ ನಂಬರ್ ಗಳಿಂದ ನನಗೆ ಫೋನ್ ಮತ್ತು ಮೆಸೇಜ್ ಮಾಡಿದರು. ಆದರೆ ಈಗ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರು ಮತ್ತು ನಮ್ಮ‌ಊರಿನಲ್ಲಿ ನನಗೆ ಆಗದವರು ನಮ್ಮ ವಿರುದ್ಧ ಷಡ್ಯಂತರ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿಕೆ ನೀಡಿದ್ದಾರೆ.ಇನ್ನೂ ಮಹಿಳೆಯ ಗಂಡ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಇತ್ತ ಸ್ವಾಮೀಜಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.

ಒಟ್ಟಾರೆ ಸೈಟ್ ನ ವಿಚಾರಕ್ಕೆ ಆರಂಭವಾದ ಮನಸ್ಥಾಪ ಈಗ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ವರೆಗೆ ತಲುಪಿದೆ. ಈಗಾಗಲೇ ದೂರು ಪ್ರತಿ ದೂರು ದಾಖಲಾಗಿದ್ದು ಪೊಲೀಸ್ ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಬೇಕಿದೆ.

Ramesh Babu

Journalist

Recent Posts

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

17 minutes ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

1 hour ago

Ставки на спорт в Украине_ основы и стратегии(1)

Ставки на спорт UA: советы и стратегии для успеха Ставки на спорт в Украине: основы…

11 hours ago

ದೊಡ್ಡಬಳ್ಳಾಪುರ ನೂತನ ಉಪವಿಭಾಗಾಧಿಕಾರಿಯಾಗಿ ಮಂಜುನಾಥ್ ಟಿ.ಆರ್ ಅಧಿಕಾರ ಸ್ವೀಕಾರ

ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…

14 hours ago

ನಾಳೆ (ಏ.23) SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ

ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…

15 hours ago

ಮತಾಂತರ ವಿರುದ್ಧ ದೇಶಾದ್ಯಂತ ಜಾಗೃತಿ ಕಾರ್ಯಕ್ರಮ

ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ  ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…

16 hours ago