ವಾಲ್ಮೀಕಿ ಸಮಾಜದ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳದ ಆರೋಪ

ಆಕೆ ಪೋಷಕರ ವಿರೋಧದ ನಡುವೆ ಪ್ರೀತಿಸಿ ಮದುವೆ ಆಗಿದ್ದಳು. ಗಂಡನ ಜೊತೆಗೆ ನೆಮ್ಮದಿಯಾಗಿ ಇರಬೇಕು ಎಂದು ಒಂದು ಸೈಟ್ ಕೊಂಡುಕೊಳ್ಳಲು‌ ಮುಂದಾಗಿದ್ದಾಳೆ. ಈ ವೇಳೆ ಸೈಟ್ ಕೊಳ್ಳಲು ಓರ್ವ ಸ್ವಾಮೀಜಿಯನ್ನ ಮಧ್ಯಸ್ಥಿಕೆಗೆ ಕರೆದಿದ್ದಾಳೆ. ಇವರಿಬ್ಬರ ಮಧ್ಯೆ ಹಣದ ವಿಚಾರಕ್ಕೆ ಮನಃಸ್ತಾಪ ಉಂಟಾಗಿ ಈಗ ಸ್ವಾಮೀಜಿ ನನಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪ ಮಾಡಿದ್ದಾಳೆ. ಈ ಕುರಿತ ಕಂಪ್ಲೀಟ್ ವರದಿ ಇಲ್ಲಿದೆ ಓದಿ……………

ಹೌದು ಹೀಗೆ ದಾಖಲೆಗಳನ್ನ ತೋರಿಸುತ್ತಿರುವ ಸ್ವಾಮೀಜಿ, ನಮ್ಮ ಸ್ವಾಮೀಜಿ ಅಂಥವರಲ್ಲ ಎಂದು ಆಕ್ರೋಶ ಹೊರ ಹಾಕುತ್ತಿರುವ ಭಕ್ತಾಧಿಗಳು, ನನ್ನ ಹೆಂಡತಿಗೆ ಕಿರುಕುಳ ನೀಡಿದ್ದಾರೆ ಎಂದು ದೂರು ನೀಡುತ್ತಿರುವ ಗಂಡ ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆ ಬಳಿ.

ಹೌದು ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯೊಬ್ಬಳು, ತನಗೆ ಲೈಗಿಂಕ‌ ಕಿರುಕುಳ‌ ನೀಡುತ್ತಿದ್ದಾರೆ ಎಂದು ಸೆಲ್ಫಿ ವಿಡಿಯೋ ಮಾಡಿ ಆರೋಪ ಮಾಡಿದ್ದಾಳೆ‌. ಐದು ಸಾವಿರ ಹಣ ಕೇಳಿದರೆ ರೂಂ ಗೆ ಬಾ, ಆಮೇಲೆ ಹಣ ಕೊಡುತ್ತೇನೆ ಎಂದು ಸ್ವಾಮೀಜಿ ಕರೆಯುತ್ತಿದ್ದಾನೆ, ಪ್ರತಿನಿತ್ಯ ಕಾಲ್ ಮಾಡಿ ಕಿರುಕುಳ ನೀಡುತ್ತಿದ್ದಾನೆ. ಮಹಿಳೆ ಒಂಟಿಯಾಗಿದ್ದಾಗ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದಾನೆ ಹಾಗಾಗಿ ನನಗೆ ಆದ ರೀತಿ ಯಾವ ಮಹಿಳೆಗೂ ಆಗುವುದು ಬೇಡ, ನನಗೆ ನ್ಯಾಯ ಬೇಕು ಎಂದು ಮಹಿಳೆ ಆರೋಪಿಸಿ ವಿಡಿಯೋ ಹರಿ ಬಿಟ್ಟಿದ್ದಾಳೆ.

ಇನ್ನೂ ಈ ರೀತಿ ಗಂಭೀರ ಆರೋಪ ಎದುರಿಸುತ್ತಿರುವ ಸ್ವಾಮೀಜಿಯ ಹೆಸರು ಬ್ರಹ್ಮಾನಂದ ಗುರೂಜಿ ಅಂತ. ಈ ವಿಚಾರವಾಗಿ ಈತ ಹೇಳುವ ಮಾತೇ ಬೇರೆ. ಮಹಿಳೆ ಗಂಡ ನನಗೆ ಬಹಳ ಪರಿಚಯ. ಹಾಗಾಗಿ ಅವರು ನಮ್ಮ ಬಳಿ ಬಂದು ಒಂದು ಸೈಟ್ ಕೊಡಿಸುವುದಾಗಿ ಕೇಳಿಕೊಂಡರು. ಆಗ ನನಗೆ ಪರಿಚಯ ಇದ್ದ ಒಬ್ಬರ ಬಳಿ 11 ಲಕ್ಷಕ್ಕೆ ಸೈಟ್ ಕೊಡಿಸಿದ್ದ. ಅದು ಕೆಲವೇ ದಿನಗಳಲ್ಲಿ ಸೈಟ್ ಇ ಖಾತೆ ಮಾಡುವುದನ್ನ ಸರಕಾರ ನಿಲ್ಲಿಸಿತು. ಆಗ ಅವರ ಹಣವನ್ನ ವಾಪಸ್ ನೀಡಿದ್ದೇವೆ. ಈ ವೇಳೆ ಮಹಿಳೆ ನನ್ನ ಜೊತೆ ಸಲುಗೆಯಿಂದ ಮಾತ‌ನಾಡಲು ಮುಂದಾದಳು. ಆಗ ನಾನು ಅವರ ನಂಬರ್ ಬ್ಲಾಕ್ ಮಾಡಿದೆ. ನಂತರ ಕೂಡ ಬೇರೆ ಬೇರೆ ನಂಬರ್ ಗಳಿಂದ ನನಗೆ ಫೋನ್ ಮತ್ತು ಮೆಸೇಜ್ ಮಾಡಿದರು. ಆದರೆ ಈಗ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಇವರು ಮತ್ತು ನಮ್ಮ‌ಊರಿನಲ್ಲಿ ನನಗೆ ಆಗದವರು ನಮ್ಮ ವಿರುದ್ಧ ಷಡ್ಯಂತರ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆರೋಪಗಳು ಸುಳ್ಳು ಎಂದು ಹೇಳಿಕೆ ನೀಡಿದ್ದಾರೆ.ಇನ್ನೂ ಮಹಿಳೆಯ ಗಂಡ ಮಹಿಳಾ ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರೆ, ಇತ್ತ ಸ್ವಾಮೀಜಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರತಿ ದೂರು ದಾಖಲಿಸಿದ್ದಾರೆ.

ಒಟ್ಟಾರೆ ಸೈಟ್ ನ ವಿಚಾರಕ್ಕೆ ಆರಂಭವಾದ ಮನಸ್ಥಾಪ ಈಗ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪದ ವರೆಗೆ ತಲುಪಿದೆ. ಈಗಾಗಲೇ ದೂರು ಪ್ರತಿ ದೂರು ದಾಖಲಾಗಿದ್ದು ಪೊಲೀಸ್ ತನಿಖೆಯ ನಂತರ ಸತ್ಯಾಸತ್ಯತೆ ತಿಳಿಯಬೇಕಿದೆ.

Ramesh Babu

Journalist

Recent Posts

ತಡರಾತ್ರಿ ರೌಡಿ ಶೀಟರ್‌ ಬರ್ಬರ ಹತ್ಯೆ: ಸೂಲಿಬೆಲೆಯಲ್ಲಿ ಭೀಕರ ಘಟನೆ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಗ್ರಾಮದಲ್ಲಿ ತಡರಾತ್ರಿ ರೌಡಿ ಶೀಟರ್‌ನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಬರ್ಬರವಾಗಿ ಹತ್ಯೆ…

49 minutes ago

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

3 hours ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

22 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

1 day ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

2 days ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 days ago