ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ, ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಅಗ್ರಹಿಸಿದರು.
ಈ ಕುರಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆಗಿದೆ. ರಮೇಶ್ ಕತ್ತಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ. ಸದಾ ಹೋರಾಟದ ಬದುಕನ್ನು ಸಾಗಿಸಿ ಶಾಂತಿ ಸೌಹಾರ್ದಕ್ಕೆ ಹೆಸರಾದ ನಮ್ಮ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿದ್ದಾರೆ ಎಂದು ಗುಡುಗಿದರು.
ಇವರು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವ್ಯಕ್ತಿಯಾಗಿದ್ದು, ಇಂತಹವರಿಂದ ನಮ್ಮ ಜಾತಿ/ಜನಾಂಗದವರಿಗೆ ತುಂಬಾ ಹೀನಾಯವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಾನೂನು ವಿರುದ್ಧವಾಗಿರುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕಾನೂನು ರೀತಿ ಕ್ರಮ ಜರುಗಿಸಿ ಅವರ ಮೇಲೆ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್ ದಾಖಲು ಮಾಡಿ ಇವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ ನಾಯಕ ಜಾತಿ/ಜನಾಂಗದವರಿಗೆ ಮಾಡಿರುವ ಅವಮಾನಕ್ಕೆ ತಕ್ಕ ಶಿಕ್ಷೆ ಕೊಡಬೇಕೆಂದು ಡಿವೈಎಸ್ಪಿ ರವಿ ಪಿ ಅವರಿಗೆ ಮನವಿ ಮಾಡಿದರು.
ಈ ವೇಳೆ ವಾಲ್ಮೀಕಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಪ್ರೇಮಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಾಲ್ಲೂಕು ಉಪಾಧ್ಯಕ್ಷ ಸಿ ಕುಮಾರ್, ತಾಲ್ಲೂಕು ನಿರ್ದೇಶಕರಾದ ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ರಾಜು, ವೆಂಕಟೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…