ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನ: ರಮೇಶ್ ಕತ್ತಿ ವಿರುದ್ಧ ದೂರು ನೀಡಿದ ವಾಲ್ಮೀಕಿ ಸಮುದಾಯ ಮುಖಂಡರು

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ, ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಅಗ್ರಹಿಸಿದರು.

ಈ‌ ಕುರಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆಗಿದೆ. ರಮೇಶ್ ಕತ್ತಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ. ಸದಾ ಹೋರಾಟದ ಬದುಕನ್ನು ಸಾಗಿಸಿ ಶಾಂತಿ ಸೌಹಾರ್ದಕ್ಕೆ ಹೆಸರಾದ ನಮ್ಮ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿದ್ದಾರೆ ಎಂದು ಗುಡುಗಿದರು.

ಇವರು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವ್ಯಕ್ತಿಯಾಗಿದ್ದು, ಇಂತಹವರಿಂದ ನಮ್ಮ ಜಾತಿ/ಜನಾಂಗದವರಿಗೆ ತುಂಬಾ ಹೀನಾಯವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಾನೂನು ವಿರುದ್ಧವಾಗಿರುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕಾನೂನು ರೀತಿ ಕ್ರಮ ಜರುಗಿಸಿ ಅವರ ಮೇಲೆ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್ ದಾಖಲು ಮಾಡಿ ಇವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ ನಾಯಕ ಜಾತಿ/ಜನಾಂಗದವರಿಗೆ ಮಾಡಿರುವ ಅವಮಾನಕ್ಕೆ ತಕ್ಕ ಶಿಕ್ಷೆ ಕೊಡಬೇಕೆಂದು ಡಿವೈಎಸ್ಪಿ ರವಿ ಪಿ ಅವರಿಗೆ ಮನವಿ ಮಾಡಿದರು.

ಈ ವೇಳೆ ವಾಲ್ಮೀಕಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಪ್ರೇಮಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಾಲ್ಲೂಕು ಉಪಾಧ್ಯಕ್ಷ ಸಿ ಕುಮಾರ್, ತಾಲ್ಲೂಕು ನಿರ್ದೇಶಕರಾದ ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ರಾಜು, ವೆಂಕಟೇಶ್ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

11 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

11 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

14 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

14 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

23 hours ago