ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನ: ರಮೇಶ್ ಕತ್ತಿ ವಿರುದ್ಧ ದೂರು ನೀಡಿದ ವಾಲ್ಮೀಕಿ ಸಮುದಾಯ ಮುಖಂಡರು

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ, ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಅಗ್ರಹಿಸಿದರು.

ಈ‌ ಕುರಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆಗಿದೆ. ರಮೇಶ್ ಕತ್ತಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ. ಸದಾ ಹೋರಾಟದ ಬದುಕನ್ನು ಸಾಗಿಸಿ ಶಾಂತಿ ಸೌಹಾರ್ದಕ್ಕೆ ಹೆಸರಾದ ನಮ್ಮ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿದ್ದಾರೆ ಎಂದು ಗುಡುಗಿದರು.

ಇವರು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವ್ಯಕ್ತಿಯಾಗಿದ್ದು, ಇಂತಹವರಿಂದ ನಮ್ಮ ಜಾತಿ/ಜನಾಂಗದವರಿಗೆ ತುಂಬಾ ಹೀನಾಯವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಾನೂನು ವಿರುದ್ಧವಾಗಿರುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕಾನೂನು ರೀತಿ ಕ್ರಮ ಜರುಗಿಸಿ ಅವರ ಮೇಲೆ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್ ದಾಖಲು ಮಾಡಿ ಇವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ ನಾಯಕ ಜಾತಿ/ಜನಾಂಗದವರಿಗೆ ಮಾಡಿರುವ ಅವಮಾನಕ್ಕೆ ತಕ್ಕ ಶಿಕ್ಷೆ ಕೊಡಬೇಕೆಂದು ಡಿವೈಎಸ್ಪಿ ರವಿ ಪಿ ಅವರಿಗೆ ಮನವಿ ಮಾಡಿದರು.

ಈ ವೇಳೆ ವಾಲ್ಮೀಕಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಪ್ರೇಮಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಾಲ್ಲೂಕು ಉಪಾಧ್ಯಕ್ಷ ಸಿ ಕುಮಾರ್, ತಾಲ್ಲೂಕು ನಿರ್ದೇಶಕರಾದ ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ರಾಜು, ವೆಂಕಟೇಶ್ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

14 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

5 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

18 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago