ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನ: ರಮೇಶ್ ಕತ್ತಿ ವಿರುದ್ಧ ದೂರು ನೀಡಿದ ವಾಲ್ಮೀಕಿ ಸಮುದಾಯ ಮುಖಂಡರು

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ, ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಅಗ್ರಹಿಸಿದರು.

ಈ‌ ಕುರಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆಗಿದೆ. ರಮೇಶ್ ಕತ್ತಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ. ಸದಾ ಹೋರಾಟದ ಬದುಕನ್ನು ಸಾಗಿಸಿ ಶಾಂತಿ ಸೌಹಾರ್ದಕ್ಕೆ ಹೆಸರಾದ ನಮ್ಮ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿದ್ದಾರೆ ಎಂದು ಗುಡುಗಿದರು.

ಇವರು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವ್ಯಕ್ತಿಯಾಗಿದ್ದು, ಇಂತಹವರಿಂದ ನಮ್ಮ ಜಾತಿ/ಜನಾಂಗದವರಿಗೆ ತುಂಬಾ ಹೀನಾಯವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಾನೂನು ವಿರುದ್ಧವಾಗಿರುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕಾನೂನು ರೀತಿ ಕ್ರಮ ಜರುಗಿಸಿ ಅವರ ಮೇಲೆ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್ ದಾಖಲು ಮಾಡಿ ಇವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ ನಾಯಕ ಜಾತಿ/ಜನಾಂಗದವರಿಗೆ ಮಾಡಿರುವ ಅವಮಾನಕ್ಕೆ ತಕ್ಕ ಶಿಕ್ಷೆ ಕೊಡಬೇಕೆಂದು ಡಿವೈಎಸ್ಪಿ ರವಿ ಪಿ ಅವರಿಗೆ ಮನವಿ ಮಾಡಿದರು.

ಈ ವೇಳೆ ವಾಲ್ಮೀಕಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಪ್ರೇಮಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಾಲ್ಲೂಕು ಉಪಾಧ್ಯಕ್ಷ ಸಿ ಕುಮಾರ್, ತಾಲ್ಲೂಕು ನಿರ್ದೇಶಕರಾದ ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ರಾಜು, ವೆಂಕಟೇಶ್ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

10 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

17 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

18 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago