ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನ: ರಮೇಶ್ ಕತ್ತಿ ವಿರುದ್ಧ ದೂರು ನೀಡಿದ ವಾಲ್ಮೀಕಿ ಸಮುದಾಯ ಮುಖಂಡರು

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯ ವೇಳೆ ವಾಲ್ಮೀಕಿ ಸಮುದಾಯದ ಬಗ್ಗೆ ರಮೇಶ್ ಕತ್ತಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಖಂಡನೀಯ, ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಜಾತಿ ನಿಂದನೆ ಪ್ರಕರಣ ದಾಖಲು ಮಾಡಬೇಕೆಂದು ವಾಲ್ಮೀಕಿ ಸಮುದಾಯದ ಮುಖಂಡರು ಅಗ್ರಹಿಸಿದರು.

ಈ‌ ಕುರಿತು ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ವಾಲ್ಮೀಕಿ ಸಮುದಾಯದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಆಡಿಯೋ ವೈರಲ್ ಆಗಿದೆ. ರಮೇಶ್ ಕತ್ತಿ ಅವರ ವಿರುದ್ಧ ಎಫ್ ಐಆರ್ ದಾಖಲು ಮಾಡಿ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದ ಬಹುದೊಡ್ಡ ಸಂಖ್ಯೆಯ ವಾಲ್ಮೀಕಿ ಸಮುದಾಯವನ್ನು ನಿಂದಿಸುವ ಮೂಲಕ ರಮೇಶ್ ಕತ್ತಿ ದೊಡ್ಡ ತಪ್ಪು ಮಾಡಿದ್ದಾರೆ. ಸದಾ ಹೋರಾಟದ ಬದುಕನ್ನು ಸಾಗಿಸಿ ಶಾಂತಿ ಸೌಹಾರ್ದಕ್ಕೆ ಹೆಸರಾದ ನಮ್ಮ ಸಮುದಾಯವನ್ನು ಕೆದಕುವ ಮೂಲಕ ರಾಜ್ಯದಲ್ಲಿ ಶಾಂತಿ ಕದಡಿದ್ದಾರೆ ಎಂದು ಗುಡುಗಿದರು.

ಇವರು ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ವ್ಯಕ್ತಿಯಾಗಿದ್ದು, ಇಂತಹವರಿಂದ ನಮ್ಮ ಜಾತಿ/ಜನಾಂಗದವರಿಗೆ ತುಂಬಾ ಹೀನಾಯವಾಗಿ ಅವಾಚ್ಯ ಶಬ್ದಗಳಿಂದ ಬೈದಿರುವುದು ಕಾನೂನು ವಿರುದ್ಧವಾಗಿರುತ್ತದೆ. ಮಾಜಿ ಸಂಸದ ರಮೇಶ್ ಕತ್ತಿ ಮೇಲೆ ಎಸ್.ಸಿ/ಎಸ್.ಟಿ ದೌರ್ಜನ್ಯ ಕಾಯ್ದೆಯಡಿ ಕಾನೂನು ರೀತಿ ಕ್ರಮ ಜರುಗಿಸಿ ಅವರ ಮೇಲೆ ದೌರ್ಜನ್ಯ ಕಾಯ್ದೆಯಡಿ ಎಫ್.ಐ.ಆರ್ ದಾಖಲು ಮಾಡಿ ಇವರ ಮೇಲೆ ಸೂಕ್ತ ಕಾನೂನು ರೀತಿ ಕ್ರಮ ಜರುಗಿಸಿ, ಬಂಧಿಸಿ ನಾಯಕ ಜಾತಿ/ಜನಾಂಗದವರಿಗೆ ಮಾಡಿರುವ ಅವಮಾನಕ್ಕೆ ತಕ್ಕ ಶಿಕ್ಷೆ ಕೊಡಬೇಕೆಂದು ಡಿವೈಎಸ್ಪಿ ರವಿ ಪಿ ಅವರಿಗೆ ಮನವಿ ಮಾಡಿದರು.

ಈ ವೇಳೆ ವಾಲ್ಮೀಕಿ ಸಂಘದ ತಾಲ್ಲೂಕು ಗೌರವಾಧ್ಯಕ್ಷ ಪ್ರೇಮಕುಮಾರ್, ತಾಲ್ಲೂಕು ಅಧ್ಯಕ್ಷ ಮುನಿಕೃಷ್ಣಪ್ಪ, ತಾಲ್ಲೂಕು ಉಪಾಧ್ಯಕ್ಷ ಸಿ ಕುಮಾರ್, ತಾಲ್ಲೂಕು ನಿರ್ದೇಶಕರಾದ ವೆಂಕಟಾಚಲಯ್ಯ, ನಗರ ಅಧ್ಯಕ್ಷ ಕೇಶವಮೂರ್ತಿ, ನಗರ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ ರಾಜು, ವೆಂಕಟೇಶ್ ಸೇರಿದಂತೆ ಇತರರು  ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

55 minutes ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

12 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

13 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago