ಹೊಸಕೋಟೆ: ಚಿಂತಾಮಣಿ ಪಟ್ಟಣದಲ್ಲಿ ಮಹರ್ಷಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ನಗರಸಭೆ ಸದಸ್ಯ ಮುರಳಿ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಕೂಡಲೇ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ವಾಲ್ಮೀಕಿ ನಾಯಕ ಯುವಪಡೆ ಸಂಘಟನೆ ರಾಜ್ಯಾಧ್ಯಕ್ಷ ಸುಬ್ರಮಣಿ ಹೇಳಿದರು.
ರಾಜ್ಯ ವಾಲ್ಮೀಕಿ ನಾಯಕ ಯುವ ಪಡೆ, ವಾಲ್ಮೀಕಿ ನಾಯಕ ಗಿರಿಜನ ಯುವ ಸಂಘ, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕರ ಸಂಘದ ವತಿಯಿಂದ ನಗರದ ತಾಲೂಕು ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಚಿಂತಾಮಣಿ ನಗರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜನ ಪ್ರತಿನಿಧಿ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಮುರಳಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ವಾಲ್ಮೀಕಿ ಸಮುದಾಯದ ನಾಯಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ನಾವು ಖಂಡಿಸುತ್ತೇವೆ. ಅದಲ್ಲದೇ ಆರೋಪಿಗಳನ್ನು ಪತ್ತೆ ಹಚ್ಚಿ ಸದ್ಯದಲ್ಲಿಯೇ ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಸೂಕ್ತ ರಕ್ಷಣೆ ನೀಡಬೇಕು ಎಂದು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಾಲ್ಮೀಕಿ ನಾಯಕ ಗಿರಿಜನ ಸಂಘದ ಜಿಲ್ಲಾಧ್ಯಕ್ಷ ಕ್ಷಬನಹಳ್ಳಿ ರಮೇಶ್ ಮಾತನಾಡಿ, ಚಿಂತಾಮಣಿ ನಗರದಲ್ಲಿ ನಗರಸಭೆ ಸದಸ್ಯ ಮುರಳಿ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡಿಸಿ ಅಕ್ಟೋಬರ್ 18 ರಂದು ಚಿಂತಾಮಣಿ ಬಂದ್ಗೆ ಕರೆ ನೀಡಲಾಗಿದೆ. ನಮ್ಮ ವಾಲ್ಮೀಕಿ ಸಮುದಾಯದ ಎಲ್ಲಾ ಸಂಘಟನೆಗಳು ಕೂಡ ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದು, ಚಿಂತಾಮಣಿಗೆ ತೆರಳಿ ಪ್ರತಿಭಟನೆ ನಡೆಸುತ್ತೇವೆ. ಸಮಾಜದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದರು.
ಈ ವೇಳೆ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಂಘದ ರಾಜ್ಯಾಧ್ಯಕ್ಷ ಬೆಳ್ಳೂರು ಆಂಜಿನಪ್ಪ, ವಾಲ್ಮೀಕಿ ನಾಯಕ ಗಿರಿಜನ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೊಟ್ಟಿಪುರ ಶ್ರೀನಿವಾಸ್, ಹಿರಿಯ ಮುಖಂಡ ತಾವಟಹಳ್ಳಿ ಮುನಿಯಪ್ಪ ಸೇರಿದಂತೆ ಸಮಾಜದ ಮುಖಂಡರು ಭಾಗವಹಿಸಿದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…