Categories: ಕೋಲಾರ

ವಾಲ್ಮೀಕಿ ಸಮುದಾಯದ ಹಾಸ್ಟೆಲ್ ಪ್ರಾರಂಭಿಸಲು 10 ಲಕ್ಷ ಅನುದಾನ: ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ವಾಲ್ಮೀಕಿ ಸಮುದಾಯದ ಮಕ್ಕಳಿಗೆ ಹಾಸ್ಟೆಲ್ ಪ್ರಾರಂಭಿಸಲು ಸರ್ಕಾರದ ಜಾಗವಿರಬೇಕು ಅಂತಹ ಸಂದರ್ಭದಲ್ಲಿ ಮಾತ್ರವೇ ಸರ್ಕಾರದಿಂದ ಅನುದಾನ ಕೊಡಿಸಲು ಸಾಧ್ಯ ಪ್ರಸ್ತುತ ಸಮುದಾಯದ ಜಾಗದಲ್ಲಿ ಸಮುದಾಯದ ಹಾಸ್ಟೆಲ್ ಗಾಗಿ 10 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಉದ್ದಾರ ಒಬ್ಬರಿಂದ ಸಾಧ್ಯವಿಲ್ಲ ದೇಶದ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯವಾಗಿದೆ ಸಮುದಾಯಗಳು ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕಾಗಿದೆ ಎಂದರು.

ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳು ಕಳೆದ ಐದಾರು ವರ್ಷಗಳಿಂದ ಕಣ್ಣು ತೊರೆಯುವಂತಾ ವಾತಾವರಣ ಸೃಷ್ಟಿಯಾಗಿದೆ ಇಂತಹ ಸಮುದಾಯಗಳೊಂದಿಗೆ ಬಲಿಷ್ಠ ಸಮುದಾಯಗಳು ಕೈಜೋಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು

ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ರಾಜಕೀಯದಲ್ಲಿ ಸಮುದಾಯಕ್ಕಾಗಿ ತಪ್ಪಿ ಹೋಗಿರುವ ಎರಡು ಸಚಿವ ಸ್ಥಾನಗಳನ್ನು ಪುನಃ ನೀಡಲು ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ಕೋಲಾರದಲ್ಲಿ ಎಲ್ಲಾ ಸಮಾಜಕ್ಕೆ ಸೇರಿದ ಹಾಸ್ಟೆಲ್ ಗಳೂ ಇದ್ದು, ನಿಮ್ಮ ಸಮುದಾಯಕ್ಕೂ ನ್ಯಾಯ ಒದಗಿಸಲಾಗುವುದು ಎಂದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ವಾಲ್ಮೀಕಿ ಎಂದೊಡನೆ ನಮಗೆ ನೆನಪಾಗುವುದೇ ರಾಮಾಯಣ. ಅವರ ಇತಿಹಾಸದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಬೇಡರ ಕಣ್ಣಪ್ಪ, ಏಕಲವ್ಯ, ಚಿತ್ರದುರ್ಗದ ಕೊನೆಯ ಪಾಳೆಯಗಾರ ಮದಕರಿ ನಾಯಕ ಸೇರಿದಂತೆ ಅನೇಕ ಮಹನೀಯರು ಸಮುದಾಯದಲ್ಲಿದ್ದು ಇತಿಹಾಸವಿರುವ ದೊಡ್ಡ ಸಮಾಜವಾಗಿದೆ.ಹಾಸ್ಟೆಲ್ ನಿರ್ಮಾಣ ನಮ್ಮ‌‌ ಅನುದಾನ‌‌ದಿಂದ ಸಾಲುವುದಿಲ್ಲ. ಅದರ ಜತೆಗೆ ಎಸ್ಸಿಪಿ, ಟಿಎಸ್ಪಿ‌ ಹಣ ಕೊಡಿಸಿ ಸೌಲಭ್ಯ ಕಲ್ಪಿಸಲಾಗುವುದು ಎಂದ ಅವರು, ಉನ್ನತ ಶಿಕ್ಷಣ ಪಡೆದು ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಗರಸಭೆ ಸದಸ್ಯ, ಸಮುದಾಯದ ಮುಖಂಡ ಅಂಬರೀಷ್, ನಾವು ಸಾಕಷ್ಟು ಹಿಂದೆ ಉಳಿದಿದ್ದು, ಕುರುಬ ಸಮುದಾಯವನ್ನು ನಮ್ಮ ಜತೆಗೆ ಬೇಡ.
ನಮ್ಮ‌ ಮರಣ ಶಾಸನ ಬರೆದಂತಾಗುತ್ತದೆ.ಕೋಟೆ ವಾಲ್ಮೀಕಿ‌ ಭವನದ ಮೇಲೆ ಹಾಸ್ಟೆಲ್ ಕಟ್ಟಡ ಅನುಕೂಲ ಮಾಡಿಕೊಟ್ಟರೆ ನಾವೇ ಊಟದ ವ್ಯವಸ್ಥೆ ಮಾಡುತ್ತೇವೆ ರಾಮನಿಗೆ ಜೆಂಡಾ ನೀಡಿದ್ದೇ ವಾಲ್ಮೀಕಿ ಆದರೆ ಇಂದು
ವಾಲ್ಮೀಕಿ ಅವರ ಪುತ್ಥಳಿಗೆ ಬಜರಂಗದಳ, ಆರ್‌ಎಸ್ ಎಸ್ ನವರು ಹಾರ ಹಾಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ 50ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಾಲ್ಮೀಕಿ ಸಮಾಜದ ಮುಖಂಡರಾದ, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಬೈರಂಡಹಳ್ಳಿ ನಾಗೇಶ್, ಮಂಜುಳಾ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಪಂಡಿತ್ ಮುನಿವೆಂಕಟಪ್ಪ, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಗಂಗಣ್ಣ, ಅಮರನಾಥ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಏಜಾಜ್, ರಾಮಯ್ಯ, ವ್ಯಾಪಲಪಲ್ಲಿ ನರೇಶ್, ವಾಸು, ಸಿಂಗಹಳ್ಳಿ ಮುರಳಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ…!

ದೇವರಹಿಪ್ಪರಗಿ: ‍ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…

31 minutes ago

ವಾಹನ ತಪಾಸಣ ಪೊಲೀಸರಿಗೆ ಹೆದರಿ ಜೀವ ಕಳೆದುಕೊಂಡ ಬೈಕ್ ಸವಾರ ಪತಿ….ಕಾಲುಗಳು ಮುರಿದು ಆಪರೇಷನ್ ರೂಮಿನಲ್ಲಿ  ಪತ್ನಿ….

ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…

1 hour ago

ಮಹಿಳೆಯರಿಗೆ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಬಗ್ಗೆ ಮತ್ತೆ ಸುಪ್ರೀಂನಲ್ಲಿ ವಾದ ವಿವಾದ ಪ್ರಾರಂಭ

ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…

2 hours ago

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

11 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

13 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

14 hours ago