Categories: ಕೋಲಾರ

ವಾಲ್ಮೀಕಿ ಸಮುದಾಯದ ಹಾಸ್ಟೆಲ್ ಪ್ರಾರಂಭಿಸಲು 10 ಲಕ್ಷ ಅನುದಾನ: ಕೊತ್ತೂರು ಮಂಜುನಾಥ್ ಭರವಸೆ

ಕೋಲಾರ: ವಾಲ್ಮೀಕಿ ಸಮುದಾಯದ ಮಕ್ಕಳಿಗೆ ಹಾಸ್ಟೆಲ್ ಪ್ರಾರಂಭಿಸಲು ಸರ್ಕಾರದ ಜಾಗವಿರಬೇಕು ಅಂತಹ ಸಂದರ್ಭದಲ್ಲಿ ಮಾತ್ರವೇ ಸರ್ಕಾರದಿಂದ ಅನುದಾನ ಕೊಡಿಸಲು ಸಾಧ್ಯ ಪ್ರಸ್ತುತ ಸಮುದಾಯದ ಜಾಗದಲ್ಲಿ ಸಮುದಾಯದ ಹಾಸ್ಟೆಲ್ ಗಾಗಿ 10 ಲಕ್ಷ ಅನುದಾನ ನೀಡಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್ ತಿಳಿಸಿದರು

ನಗರ ಹೊರವಲಯದ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ಸಮಾಜ ಸಂಘಟನೆಗಳ ನೇತೃತ್ವದಲ್ಲಿ ಆಯೋಜಿಸಿದ್ದ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಮಾಜ ಉದ್ದಾರ ಒಬ್ಬರಿಂದ ಸಾಧ್ಯವಿಲ್ಲ ದೇಶದ ಅಭಿವೃದ್ಧಿಗೆ ಎಲ್ಲರ ಸಹಕಾರ ಮುಖ್ಯವಾಗಿದೆ ಸಮುದಾಯಗಳು ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕಾಗಿದೆ ಎಂದರು.

ಸಮಾಜದಲ್ಲಿ ಸಣ್ಣಪುಟ್ಟ ಸಮುದಾಯಗಳು ಕಳೆದ ಐದಾರು ವರ್ಷಗಳಿಂದ ಕಣ್ಣು ತೊರೆಯುವಂತಾ ವಾತಾವರಣ ಸೃಷ್ಟಿಯಾಗಿದೆ ಇಂತಹ ಸಮುದಾಯಗಳೊಂದಿಗೆ ಬಲಿಷ್ಠ ಸಮುದಾಯಗಳು ಕೈಜೋಡಿಸಿ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕಾಗಿದೆ ಎಂದರು

ವಿಧಾನ ಪರಿಷತ್ ಸದಸ್ಯ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಮಾತನಾಡಿ, ರಾಜಕೀಯದಲ್ಲಿ ಸಮುದಾಯಕ್ಕಾಗಿ ತಪ್ಪಿ ಹೋಗಿರುವ ಎರಡು ಸಚಿವ ಸ್ಥಾನಗಳನ್ನು ಪುನಃ ನೀಡಲು ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ನಿಮ್ಮೊಂದಿಗೆ ಸದಾ ನಾವು ಇರುತ್ತೇವೆ. ಕೋಲಾರದಲ್ಲಿ ಎಲ್ಲಾ ಸಮಾಜಕ್ಕೆ ಸೇರಿದ ಹಾಸ್ಟೆಲ್ ಗಳೂ ಇದ್ದು, ನಿಮ್ಮ ಸಮುದಾಯಕ್ಕೂ ನ್ಯಾಯ ಒದಗಿಸಲಾಗುವುದು ಎಂದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ವಾಲ್ಮೀಕಿ ಎಂದೊಡನೆ ನಮಗೆ ನೆನಪಾಗುವುದೇ ರಾಮಾಯಣ. ಅವರ ಇತಿಹಾಸದ ಬಗ್ಗೆ ಸಾಕಷ್ಟು ಚರ್ಚೆಯಾಗಿದೆ. ಬೇಡರ ಕಣ್ಣಪ್ಪ, ಏಕಲವ್ಯ, ಚಿತ್ರದುರ್ಗದ ಕೊನೆಯ ಪಾಳೆಯಗಾರ ಮದಕರಿ ನಾಯಕ ಸೇರಿದಂತೆ ಅನೇಕ ಮಹನೀಯರು ಸಮುದಾಯದಲ್ಲಿದ್ದು ಇತಿಹಾಸವಿರುವ ದೊಡ್ಡ ಸಮಾಜವಾಗಿದೆ.ಹಾಸ್ಟೆಲ್ ನಿರ್ಮಾಣ ನಮ್ಮ‌‌ ಅನುದಾನ‌‌ದಿಂದ ಸಾಲುವುದಿಲ್ಲ. ಅದರ ಜತೆಗೆ ಎಸ್ಸಿಪಿ, ಟಿಎಸ್ಪಿ‌ ಹಣ ಕೊಡಿಸಿ ಸೌಲಭ್ಯ ಕಲ್ಪಿಸಲಾಗುವುದು ಎಂದ ಅವರು, ಉನ್ನತ ಶಿಕ್ಷಣ ಪಡೆದು ಹೆಚ್ಚು ಹೆಚ್ಚು ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ನಗರಸಭೆ ಸದಸ್ಯ, ಸಮುದಾಯದ ಮುಖಂಡ ಅಂಬರೀಷ್, ನಾವು ಸಾಕಷ್ಟು ಹಿಂದೆ ಉಳಿದಿದ್ದು, ಕುರುಬ ಸಮುದಾಯವನ್ನು ನಮ್ಮ ಜತೆಗೆ ಬೇಡ.
ನಮ್ಮ‌ ಮರಣ ಶಾಸನ ಬರೆದಂತಾಗುತ್ತದೆ.ಕೋಟೆ ವಾಲ್ಮೀಕಿ‌ ಭವನದ ಮೇಲೆ ಹಾಸ್ಟೆಲ್ ಕಟ್ಟಡ ಅನುಕೂಲ ಮಾಡಿಕೊಟ್ಟರೆ ನಾವೇ ಊಟದ ವ್ಯವಸ್ಥೆ ಮಾಡುತ್ತೇವೆ ರಾಮನಿಗೆ ಜೆಂಡಾ ನೀಡಿದ್ದೇ ವಾಲ್ಮೀಕಿ ಆದರೆ ಇಂದು
ವಾಲ್ಮೀಕಿ ಅವರ ಪುತ್ಥಳಿಗೆ ಬಜರಂಗದಳ, ಆರ್‌ಎಸ್ ಎಸ್ ನವರು ಹಾರ ಹಾಕಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಿದ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಎಂಎಲ್ಸಿ ಅನಿಲ್ ಕುಮಾರ್ ಪಲ್ಲಕ್ಕಿಗಳ ಮೆರವಣಿಗೆಯನ್ನು ಡೊಳ್ಳು ಹೊಡೆಯುವ ಮೂಲಕ ಚಾಲನೆ ನೀಡಿದರು ವಿವಿಧ ಇಲಾಖೆಗಳು ಹಾಗೂ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಿಂದ ಬಂದ 50ಕ್ಕೂ ಹೆಚ್ಚು ಪಲ್ಲಕ್ಕಿಗಳು ಹಾಗೂ ಜಾನಪದ ಕಲಾ ತಂಡಗಳು ನೋಡುಗರ ಗಮನ ಸೆಳೆಯಿತು

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಎಂ.ಆರ್ ರವಿ, ಜಿಪಂ ಸಿಇಒ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ‌.ನಿಖಿಲ್, ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸನ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ವಾಲ್ಮೀಕಿ ಸಮಾಜದ ಮುಖಂಡರಾದ, ಬಾಲಗೋವಿಂದ್, ಮಾಲೂರು ವೆಂಕಟರಾಮ್, ಕುಡುವನಹಳ್ಳಿ ಆನಂದ್, ಕೋಟೆ ಶ್ರೀನಿವಾಸ್, ಬೈರಂಡಹಳ್ಳಿ ನಾಗೇಶ್, ಮಂಜುಳಾ ಶ್ರೀನಿವಾಸ್, ಡಿಪಿಎಸ್ ಮುನಿರಾಜು, ಪಂಡಿತ್ ಮುನಿವೆಂಕಟಪ್ಪ, ಮೈಲಾಂಡಹಳ್ಳಿ ಮುರಳಿ, ಅಪ್ಸರ್, ಗಂಗಣ್ಣ, ಅಮರನಾಥ, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಏಜಾಜ್, ರಾಮಯ್ಯ, ವ್ಯಾಪಲಪಲ್ಲಿ ನರೇಶ್, ವಾಸು, ಸಿಂಗಹಳ್ಳಿ ಮುರಳಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಪ್ರಮಾಣ ವಚನ ಅಥವಾ ಪ್ರತಿಜ್ಞಾ ವಿಧಿ……. ಇವು ಆತ್ಮಸಾಕ್ಷಿಯ ನುಡಿಗಳೇ – ಸಂವಿಧಾನಾತ್ಮಕ ಕರ್ತವ್ಯವೇ – ಒಂದು ಒಣ ವಿಧಿ ವಿಧಾನವೇ…….

ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…

3 hours ago

ದೊಡ್ಡಬಳ್ಳಾಪುರ ತಾಲೂಕು ಯಾದವ ಯುವ ವೇದಿಕೆಗೆ ನೂತನ ಪದಾಧಿಕಾರಿಗಳ ನೇಮಕ

ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…

17 hours ago

‘ಕೆಐಎಡಿಬಿ ಮಧ್ಯವರ್ತಿ ಸಂಸ್ಥೆ’: ಜೂ.5ಕ್ಕೆ ಭೂಸ್ವಾಧೀನ ವಿರೋಧಿಸಿ ರೈತರ ವಿಧಾನಸೌಧ ಚಲೋ: ರೈತ ಸಂಘದ ಜಿಲ್ಲಾ ಘಟಕ ಬೆಂಬಲ

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…

17 hours ago

ಇಂಧನ ಬೆಲೆ ಏರಿಕೆ ಖಂಡಿಸಿ ಕನ್ನಡ ಪಕ್ಷ ಪ್ರತಿಭಟನೆ

  ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…

17 hours ago

ಘನ ತ್ಯಾಜ್ಯ ಸಮರ್ಪಕ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಕರೆ

ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…

17 hours ago

ಮೀನಿನ ಬಲೆಯಲ್ಲಿ ಸಿಲುಕಿ ಒದ್ದಾಡಿದ ಬೃಹತ್ ಹೆಬ್ಬಾವು; ಗ್ರಾಮಸ್ಥರಿಂದ ರಕ್ಷಣೆ

ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…

20 hours ago