Categories: ಕೋಲಾರ

ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣಕ್ಕೆ ತಡೆಯಾಜ್ಞೆ: ಅಕ್ರಮ ಖಾತೆಗಳನ್ನು ರದ್ದುಗೊಳಿಸುವಂತೆ ಮನವಿ

ಕೋಲಾರ: ಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ರದ್ದು ಮಾಡಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದು ಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತದೆ. ಆದರೆ, ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ತೆರವುಗೊಳಿಸಬೇಕು ಜೊತೆಗೆ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಜಮೀನು ಇರುವ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿಕೊಂಡು ಬಂದಿದ್ದಾರೆ. ಕೂಡಲೇ ಬಡವರಿಗೆ ರಕ್ಷಣೆ ಕೊಟ್ಟು ಅಕ್ರಮಗಳಿಗೆ ಕಾರಣವಾದ ರಾಜಸ್ವ ನಿರೀಕ್ಷಕ ಲೋಕೇಶ್ ಹಾಗೂ ಬೆಳ್ಳೂರು ಗ್ರಾಪಂ ಪಿಡಿಒಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ರಾಮಸಂದ್ರ ಗ್ರಾಮದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಶಾಮೀಲು ಆಗಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತು ದಿನಗಳ ಗಡುವು ನೀಡಲಾಗಿದೆ. ತಾವುಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಜನವರಿ 7 ರಿಂದ ತಹಶಿಲ್ದಾರ್ ಕಛೇರಿ ಮುಂದೆ ಗ್ರಾಮಸ್ಥರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಅನ್ಯಾಯವಾಗಿದ್ದರೆ ನಾನೇ ನೇರವಾಗಿ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡತ್ತೇನೆ. ಇಂದು ತಹಶಿಲ್ದಾರ್ ಗಳ ಸಭೆ ಕರೆಯಲಾಗಿದೆ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ತಪ್ಪಿತಸ್ಥರು ಯಾರೇ ಆಗಲಿ‌ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

6 minutes ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

21 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago