ಕೋಲಾರ: ಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ರದ್ದು ಮಾಡಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದು ಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತದೆ. ಆದರೆ, ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ತೆರವುಗೊಳಿಸಬೇಕು ಜೊತೆಗೆ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಜಮೀನು ಇರುವ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿಕೊಂಡು ಬಂದಿದ್ದಾರೆ. ಕೂಡಲೇ ಬಡವರಿಗೆ ರಕ್ಷಣೆ ಕೊಟ್ಟು ಅಕ್ರಮಗಳಿಗೆ ಕಾರಣವಾದ ರಾಜಸ್ವ ನಿರೀಕ್ಷಕ ಲೋಕೇಶ್ ಹಾಗೂ ಬೆಳ್ಳೂರು ಗ್ರಾಪಂ ಪಿಡಿಒಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ರಾಮಸಂದ್ರ ಗ್ರಾಮದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಶಾಮೀಲು ಆಗಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತು ದಿನಗಳ ಗಡುವು ನೀಡಲಾಗಿದೆ. ತಾವುಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಜನವರಿ 7 ರಿಂದ ತಹಶಿಲ್ದಾರ್ ಕಛೇರಿ ಮುಂದೆ ಗ್ರಾಮಸ್ಥರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಅನ್ಯಾಯವಾಗಿದ್ದರೆ ನಾನೇ ನೇರವಾಗಿ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡತ್ತೇನೆ. ಇಂದು ತಹಶಿಲ್ದಾರ್ ಗಳ ಸಭೆ ಕರೆಯಲಾಗಿದೆ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ತಪ್ಪಿತಸ್ಥರು ಯಾರೇ ಆಗಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.
ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…