Categories: ಕೋಲಾರ

ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣಕ್ಕೆ ತಡೆಯಾಜ್ಞೆ: ಅಕ್ರಮ ಖಾತೆಗಳನ್ನು ರದ್ದುಗೊಳಿಸುವಂತೆ ಮನವಿ

ಕೋಲಾರ: ಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ರದ್ದು ಮಾಡಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದು ಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತದೆ. ಆದರೆ, ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ತೆರವುಗೊಳಿಸಬೇಕು ಜೊತೆಗೆ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಜಮೀನು ಇರುವ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿಕೊಂಡು ಬಂದಿದ್ದಾರೆ. ಕೂಡಲೇ ಬಡವರಿಗೆ ರಕ್ಷಣೆ ಕೊಟ್ಟು ಅಕ್ರಮಗಳಿಗೆ ಕಾರಣವಾದ ರಾಜಸ್ವ ನಿರೀಕ್ಷಕ ಲೋಕೇಶ್ ಹಾಗೂ ಬೆಳ್ಳೂರು ಗ್ರಾಪಂ ಪಿಡಿಒಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ರಾಮಸಂದ್ರ ಗ್ರಾಮದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಶಾಮೀಲು ಆಗಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತು ದಿನಗಳ ಗಡುವು ನೀಡಲಾಗಿದೆ. ತಾವುಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಜನವರಿ 7 ರಿಂದ ತಹಶಿಲ್ದಾರ್ ಕಛೇರಿ ಮುಂದೆ ಗ್ರಾಮಸ್ಥರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಅನ್ಯಾಯವಾಗಿದ್ದರೆ ನಾನೇ ನೇರವಾಗಿ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡತ್ತೇನೆ. ಇಂದು ತಹಶಿಲ್ದಾರ್ ಗಳ ಸಭೆ ಕರೆಯಲಾಗಿದೆ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ತಪ್ಪಿತಸ್ಥರು ಯಾರೇ ಆಗಲಿ‌ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

2 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

3 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

9 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

21 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

21 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

22 hours ago