Categories: ಕೋಲಾರ

ವಾಲ್ಮೀಕಿ ಸಮುದಾಯ ಭವನಗಳ ನಿರ್ಮಾಣಕ್ಕೆ ತಡೆಯಾಜ್ಞೆ: ಅಕ್ರಮ ಖಾತೆಗಳನ್ನು ರದ್ದುಗೊಳಿಸುವಂತೆ ಮನವಿ

ಕೋಲಾರ: ಜಿಲ್ಲೆಯಾದ್ಯಂತ ಕೆಲವು ಕಡೆಗಳಲ್ಲಿ ವಾಲ್ಮೀಕಿ ಸಮುದಾಯ ಭನವಗಳ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ರದ್ದು ಮಾಡಿ ಭವನಗಳ ನಿರ್ಮಾಣಕ್ಕೆ ಆದೇಶ ನೀಡಬೇಕು ರಾಮಸಂದ್ರ ಗ್ರಾಮದಲ್ಲಿನ ಅಕ್ರಮ ಖಾತೆಗಳನ್ನು ರದ್ದು ಪಡಿಸಿ ಬಡವರಿಗೆ ನ್ಯಾಯ ಒದಗಿಸುವಂತೆ ರಾಮಸಂದ್ರ ಗ್ರಾಮಸ್ಥರು ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಸೋಮವಾರ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿ, ದಲಿತರ ಅಭಿವೃದ್ಧಿಗೆ ಹಾಗೂ ಸಮುದಾಯದ ಕಾರ್ಯಕ್ರಮಗಳಿಗೆ ಭವನಗಳು ಸಹಕಾರಿಯಾಗುತ್ತದೆ. ಆದರೆ, ಕೆಲವರು ಭವನ ನಿರ್ಮಾಣಕ್ಕೆ ಕೋರ್ಟ್ ತಡೆಯಾಜ್ಞೆ ತಂದಿದ್ದು ಕೂಡಲೇ ತೆರವುಗೊಳಿಸಬೇಕು ಜೊತೆಗೆ ನರಸಾಪುರ ಹೋಬಳಿಯ ರಾಮಸಂದ್ರ ಗ್ರಾಮದಲ್ಲಿ ಜಮೀನು ಇರುವ ಉಳ್ಳವರು ಅನಧಿಕೃತ ಖಾತೆಗಳನ್ನು ಮಾಡಿಕೊಂಡು ಬಡವರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿಕೊಂಡು ಬಂದಿದ್ದಾರೆ. ಕೂಡಲೇ ಬಡವರಿಗೆ ರಕ್ಷಣೆ ಕೊಟ್ಟು ಅಕ್ರಮಗಳಿಗೆ ಕಾರಣವಾದ ರಾಜಸ್ವ ನಿರೀಕ್ಷಕ ಲೋಕೇಶ್ ಹಾಗೂ ಬೆಳ್ಳೂರು ಗ್ರಾಪಂ ಪಿಡಿಒಗಳ ಮೇಲೆ ಕಾನೂನು ಕ್ರಮ ಜರುಗಿಸಿ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.

ರಾಮಸಂದ್ರ ಗ್ರಾಮದಲ್ಲಿ ದೇವಸ್ಥಾನದ ಜಮೀನುಗಳನ್ನು ಸಹ ಅಕ್ರಮ ಖಾತೆಗಳನ್ನು ಮಾಡಿದ್ದಾರೆ. ಇಂತಹ ಅಕ್ರಮಗಳಲ್ಲಿ ಶಾಮೀಲು ಆಗಿರುವ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಹತ್ತು ದಿನಗಳ ಗಡುವು ನೀಡಲಾಗಿದೆ. ತಾವುಗಳು ಪರಿಶೀಲನೆ ಮಾಡಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕು ಇಲ್ಲದೇ ಹೋದರೆ ಜನವರಿ 7 ರಿಂದ ತಹಶಿಲ್ದಾರ್ ಕಛೇರಿ ಮುಂದೆ ಗ್ರಾಮಸ್ಥರ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ ಬಡವರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಅನ್ಯಾಯವಾಗಿದ್ದರೆ ನಾನೇ ನೇರವಾಗಿ ಗ್ರಾಮಕ್ಕೆ ಬಂದು ಪರಿಶೀಲನೆ ಮಾಡತ್ತೇನೆ. ಇಂದು ತಹಶಿಲ್ದಾರ್ ಗಳ ಸಭೆ ಕರೆಯಲಾಗಿದೆ ಸಮಸ್ಯೆಗಳ ಬಗ್ಗೆ ಅವರ ಗಮನಕ್ಕೆ ತಂದು ತಪ್ಪಿತಸ್ಥರು ಯಾರೇ ಆಗಲಿ‌ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಜೊತೆಗೆ ವಾಲ್ಮೀಕಿ ಸಮುದಾಯ ಭವನಗಳಿಗೆ ತಡೆಯಾಜ್ಞೆ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಮಂಜುಳಾ ಶ್ರೀನಿವಾಸ್, ಗ್ರಾಮಸ್ಥರಾದ ರಾಜಣ್ಣ, ಅರುಣ್ ಕುಮಾರ್, ನಾರಾಯಣಪ್ಪ, ಮುನಿಯಪ್ಪ, ಹನುಮಂತಪ್ಪ, ವೆಂಕಟಸ್ವಾಮಿ, ನಾಗರಾಜ್, ಬಾಲಕೃಷ್ಣ, ಪ್ರವೀಣ್, ವಿಎನ್ಎಸ್ ವೆಂಕಟ್, ಹರೀಷ್, ಅರುಣ್ ಕುಮಾರ್, ಅಶ್ವಥ್ ಸೇರಿದಂತೆ ಮುಂತಾದವರು ಇದ್ದರು.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

13 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

15 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

15 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

15 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

17 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

20 hours ago