Categories: ಲೇಖನ

ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ….

ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ……

ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು……

ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…….

ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು……

ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು……

ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…….

ಏಕೆಂದರೆ ನಮ್ಮ ದೇಶದ ಜನಸಂಖ್ಯೆ 141 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು…….

ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು……

ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಂಗದ ಚಳವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ. ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

5 minutes ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

1 hour ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

17 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

18 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

1 day ago