Categories: ಲೇಖನ

ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ….

ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ……

ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು……

ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…….

ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು……

ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು……

ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…….

ಏಕೆಂದರೆ ನಮ್ಮ ದೇಶದ ಜನಸಂಖ್ಯೆ 141 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು…….

ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು……

ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಂಗದ ಚಳವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ. ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

39 minutes ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

2 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

2 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

6 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

13 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

1 day ago