ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ……
ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು……
ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…….
ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು……
ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು……
ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…….
ಏಕೆಂದರೆ ನಮ್ಮ ದೇಶದ ಜನಸಂಖ್ಯೆ 141 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು…….
ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು……
ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಂಗದ ಚಳವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ. ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ
ಲೇಖಕ- ವಿವೇಕಾನಂದ. ಎಚ್.ಕೆ
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…