Categories: ಲೇಖನ

ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ….

ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ……

ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು……

ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…….

ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು……

ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು……

ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…….

ಏಕೆಂದರೆ ನಮ್ಮ ದೇಶದ ಜನಸಂಖ್ಯೆ 141 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು…….

ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು……

ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಂಗದ ಚಳವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ. ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

19 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago