Categories: ಲೇಖನ

ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ….

ಈ ವಿಷಯ ಸ್ವಲ್ಪ ವಿಚಿತ್ರವಾದರು ಇದರಲ್ಲಿರುವ ವಾಸ್ತವ ಮತ್ತು ಸತ್ಯದ ಹುಡುಕಾಟ ನಡೆಸಬೇಕಾಗಿದೆ……

ಚುನಾವಣೆಗಳಲ್ಲಿ ಮತ ಹಾಕಲು ಹಣ ಪಡೆಯುವವರಿಗೆ ಬೇಡ ಎಂದು ಹೇಳುವುದಕ್ಕಿಂತ ಅತಿ ಹೆಚ್ಚಿನ ಮಹತ್ವ ಹಣ ನೀಡುವ ಖದೀಮರಿಗೆ ಕಠಿಣ ಶಿಕ್ಷೆ ನೀಡಲು ಅಥವಾ ಅವರ ಮನಃಪರಿವರ್ತನೆಗೆ ನೀಡಬೇಕು……

ಲಂಚ ನೀಡುವ ಸಾಮಾನ್ಯ ಜನರಿಗೆ ನೀಡಬೇಡಿ ಎಂದು ಹೇಳುವುದಕ್ಕಿಂತ ಅದನ್ನು ಪಡೆಯುವ ಭ್ರಷ್ಟರಿಗೆ ಬಹಿಷ್ಕಾರ ಹಾಕಬೇಕು…….

ಕೆಟ್ಟ ಕಾರ್ಯಕ್ರಮ ನೋಡಬೇಡಿ ಎಂದು ವೀಕ್ಷಕರಿಗೆ ಹೇಳುವುದಕ್ಕಿಂತ ಆ ರೀತಿಯ ಕೆಟ್ಟ ಕಾರ್ಯಕ್ರಮ ರೂಪಿಸಿ ಪ್ರಸಾರ ಮಾಡುವ ಚಾನಲ್ ಗಳಿಗೆ ಎಚ್ಚರಿಕೆ ಕೊಟ್ಟು ದಂಡ ವಿಧಿಸಬೇಕು……

ಮೌಡ್ಯವನ್ನು ನಂಬಿ ಜ್ಯೋತಿಷಿಗಳ ಮಾತು ಕೇಳುವ ಜನರಿಗೆ ಬುದ್ಧಿ ಹೇಳುವುದಕ್ಕಿಂತ ಜ್ಯೋತಿಷಿಗಳಲ್ಲೇ ವೈಜ್ಞಾನಿಕ ಮನೋಭಾವ ಬೆಳೆಸಲು ಪ್ರಯತ್ನಿಸಬೇಕು ಅಥವಾ ಅವರನ್ನು ಹೊರಹಾಕಬೇಕು……

ಕಲಬೆರಕೆ, ಮೋಸ, ವಂಚನೆಗೆ ಒಳಗಾಗುವ ಜನರಲ್ಲಿ ಜಾಗೃತಿ ಮೂಡಿಸುವುದಕ್ಕಿಂತ ಅದನ್ನು ಮಾಡುವ ದುರುಳರನ್ನು ನಿಯಂತ್ರಿಸಲು ಆಸಕ್ತಿ ವಹಿಸಬೇಕು…….

ಏಕೆಂದರೆ ನಮ್ಮ ದೇಶದ ಜನಸಂಖ್ಯೆ 141 ಕೋಟಿಗೂ ಹೆಚ್ಚು. ಇಷ್ಟೊಂದು ಬೃಹತ್ ಮತ್ತು ವೈವಿಧ್ಯಮಯ ಜನರಿಗೆ ಸತ್ಯದ ನೆಲೆಯಲ್ಲಿ ವಾಸ್ತವಾಂಶ ತಿಳಿಸಿ ಬದಲಾಯಿಸುವುದು ಎಂತಹ ಮಹಾತ್ಮನಿಗೂ ಸಾಧ್ಯವಿಲ್ಲ. ಅದಕ್ಕೆ ಬದಲು ಹಣ ಹಂಚುವ, ಲಂಚ ಪಡೆಯುವ, ಮೌಡ್ಯ ಬಿತ್ತುವ, ಕೆಟ್ಟ ಕಾರ್ಯಕ್ರಮ ರೂಪಿಸುವ, ಕಲಬೆರಕೆ ಮಾಡುವ ಜನರ ಸಂಖ್ಯೆ ಕಡಿಮೆ ಇದೆ. ಅವರನ್ನೇ ಗುರಿಯಾಗಿಸಿ ದಕ್ಷ ಕಾರ್ಯಪಡೆ ರಚಿಸಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಅವರ ನಾಗರಿಕ ಹಕ್ಕುಗಳನ್ನು ಕಿತ್ತುಕೊಂಡು ಬಯಲು ಜೈಲುಗಳನ್ನು ನಿರ್ಮಿಸಿ ಅಲ್ಲಿ ಅವರನ್ನು ಹಾಕಿ ಅಲ್ಲಿಂದಲೇ ಅವರಿಂದ ದುಡಿಸಿಕೊಂಡು ಅವರ ಆತ್ಮಾವಲೋಕನಕ್ಕೆ ಅವಕಾಶ ಕಲ್ಪಿಸಬೇಕು…….

ಅದುಬಿಟ್ಟು ಜನ ಸರಿಯಿಲ್ಲ ಎಂಬುದನ್ನೇ ನೆಪವಾಗಿಟ್ಟುಕೊಂಡು ತಮ್ಮ ಅನೈತಿಕ ದಂಧೆಗಳನ್ನು ಮುಂದುವರಿಸಿಕೊಂಡು ಹೋಗಲು ಅವಕಾಶ ನೀಡಬಾರದು. ಇಷ್ಟೊಂದು ದೊಡ್ಡ ಗಾತ್ರದ, ಅಭಿವ್ಯಕ್ತಿ ಸ್ವಾತಂತ್ರ್ಯವಿರುವ, ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸಮಾನ ಮನಸ್ಸುಗಳ ಒಗ್ಗಟ್ಟು ಪ್ರದರ್ಶಿಸುವುದು ಸಾಧ್ಯವಿಲ್ಲದ ಮಾತು……

ಸಂಪೂರ್ಣ ಅಧಿಕಾರ ಹೊಂದಿದ ಒಂದು ಒಳ್ಳೆಯ ಸರ್ಕಾರ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಅದಕ್ಕಾಗಿ ನಮ್ಮೆಲ್ಲರ ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ ಅಂತರಂಗದ ಚಳವಳಿ ರೂಪಿಸಿಕೊಂಡು ಕ್ರಾಂತಿಕಾರಕ ಬದಲಾವಣೆಯ ಮುಖಾಂತರ ಅತ್ಯುತ್ತಮ ಸರ್ಕಾರ ರಚಿಸಿದರೆ ಇದು ಸುಲಭವಾಗುತ್ತದೆ. ನಮ್ಮ ಗಮನ ಆ ಕಡೆಯೇ ಹೆಚ್ಚು ಕೇಂದ್ರೀಕರಿಸಬೇಕಿದೆ. ಸಣ್ಣ ಪುಟ್ಟ ಬದಲಾವಣೆಗಳಿಂದ ವ್ಯವಸ್ಥೆಯ ಬದಲಾವಣೆ ಸಾಧ್ಯವಿಲ್ಲ. ಅದಕ್ಕಾಗಿ ನಿಮ್ಮೊಂದಿಗೆ ……………

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ- ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

16 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

21 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago