ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…