ವಾಹನಗಳ ‘ಹಾರ್ನ್‌’ನಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಭಾರತೀಯ ಸಂಗೀತ ವಾದ್ಯಗಳ ಶಬ್ದ ಬಳಕೆಗೆ ತೀರ್ಮಾನ- ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ

ವಾಹನಗಳ ‘ಹಾರ್ನ್‌’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಎಲ್ಲ ವಾಹನಗಳ ಹಾರ್ನ್‌ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್‌, ಮೆಥನಾಲ್‌, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.

ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.

Ramesh Babu

Journalist

Recent Posts

ಆಘಾತದಲ್ಲಿ ಮಡಿದ ಬೆಸ್ಕಾಂ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಿಸಿದ ಇಂಧನ ಸಚಿವ ಜಾರ್ಜ್‌

ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್‌ ತಲಾ ಒಂದು ಕೋಟಿ ರೂ.…

6 hours ago

ಎಸ್ಮಾ ಜಾರಿ ಮಾಡಿದರೂ ಬಗ್ಗಲ್ಲ.. ಜಗ್ಗಲ್ಲ.. ಡಿಸಿಎಂ ಡಿಕೆಶಿಗೆ ಶಾಸಕ ಧೀರಜ್ ಮುನಿರಾಜು ಸವಾಲ್

ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…

7 hours ago

ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ ಕಾಂಗ್ರೆಸ್ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ನಿಸಾರ್ ನೇಮಕ

ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…

8 hours ago

ಅಂಗವಿಕಲ ಅಭ್ಯರ್ಥಿಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…

8 hours ago

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

12 hours ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

20 hours ago