ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…