ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…