ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…