ವಾಹನಗಳ ‘ಹಾರ್ನ್’ನಲ್ಲಿ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಮಾತ್ರ ಬಳಸುವ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಎಲ್ಲ ವಾಹನಗಳ ಹಾರ್ನ್ಗಳಲ್ಲಿ ಕೊಳಲು, ತಬಲಾ, ಪಿಟೀಲು, ಹಾರ್ಮೋನಿಯಂ ಸೇರಿದಂತೆ ಕೇಳಲು ಹಿತವೆನಿಸುವ ಭಾರತೀಯ ಸಂಗೀತ ವಾದ್ಯಗಳ ಶಬ್ದಗಳನ್ನು ಬಳಸುವಂತೆ ಕಾನೂನು ರೂಪಿಸಲು ನಾನು ಯೋಜಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾರಿಗೆ ವಲಯವು ಶೇ 40ರಷ್ಟು ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದನ್ನು ನಿಯಂತ್ರಿಸಲು ಮೋದಿ ಸರ್ಕಾರ ಎಥನಾಲ್, ಮೆಥನಾಲ್, ಜೈವಿಕ ಇಂಧನ ಬಳಕೆ ಸೇರಿದಂತೆ ಹಸಿರು ವಾಹನಗಳನ್ನು ಪ್ರೋತ್ಸಾಹಿಸುತ್ತಿದೆ ಎಂದರು.
ಈಗಾಗಲೇ ಕೆಲ ಟ್ರಕ್ ಗಳಲ್ಲಿ ಈ ರೀತಿಯ ಹಾರ್ನ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಈ ರೀತಿ ಭಾರತೀಯ ಸಂಗೀತ ವಾದ್ಯಗಳ ಶಬ್ದವನ್ನು ಬಳಕೆ ಮಾಡುವುದರಿಂದ ಹಾರ್ನ್ ಹೊಡೆದಾಗ ಕೇಳಲು ಹಿತವಾಗಿರುತ್ತದೆ. ಹೀಗಾಗಿ ಸಂಗೀತ ವಾದ್ಯಗಳನ್ನು ಹಾರ್ನ್ ಆಗಿ ಎಲ್ಲಾ ವಾಹನಗಳನ್ನು ಬಳಸುವಂತೆ ಕಾನೂನು ರೂಪಿಸಲಾಗುವುದು ಎಂದು ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…