ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು ಹೌಹಾರಿ ಬೈಕ್ ತಿರುಗಿಸಿದ ಕಾರಣ ಹಿಂದಿನಿಂದ ವೇಗವಾಗಿ ಬಂದು ಡಿಕ್ಕಿಯಾದ ಪಿಕಪ್ ವಾಹನ.
ತರುವಾಯ, ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾಗಿ, ಬೈಕ್ ಹಿಂಬದಿಯಲ್ಲಿದ್ದ ಪತ್ನಿಯ ಕಾಲುಗಳು ಮುರಿದ ಪ್ರಸಂಗ ಕೂಡುಮಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಕೂಡುಮಂಗಳೂರು ಗ್ರಾಮಾಂತರ ಠಾಣೆಯ ಸಮೀಪ ಮರೂರು ಗ್ರಾಮದ ಕೃಷಿಕ ದಂಪತಿಯ ಬೈಕ್ ಗೆ ವಾಹನ ಡಿಕ್ಕಿಯಾಗಿ ಅಮಾಯಕ ಸವಾರ ಬಲಿಯಾಗಿದ್ದು..ಸವಾರನ ಪತ್ನಿಯ ಕಾಲುಗಳು ಮುರಿದಿದೆ.
ಕೃಷಿ ಕೂಲಿ ಕಾರ್ಮಿಕರಾದ ಈ ಬೈಕ್ ಸವಾರ ದಂಪತಿ ನಿತ್ಯವೂ ಕೂಲಿ ಮಾಡಿಯೇ ಜೀವನ ನಡೆಸುತ್ತಿದ್ದರು. ಇವರಿಗೆ ಚಿಕ್ಕ ವಯಸ್ಸಿನ ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿವೆ.
ಮರೂರು ಗ್ರಾಮದ ತಮ್ಮ ನೆರೆಮನೆಯವರ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಈ ದಂಪತಿ ಪಿರಿಯಾಪಟ್ಟಣದಲ್ಲಿ ಮೃತಪಟ್ಟ ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದರು ಎನ್ನಲಾಗಿದೆ.
ಮರೂರು ಗ್ರಾಮದ ತಮ್ಮ ಮನೆಯಿಂದ ಹೊರಟ ಈ ದಂಪತಿಗಳು ಸಂಬಂಧಿಕರ ಸಾವಿನ ಮನೆಗೆ ಹೋಗಿ ಮಾತನಾಡಿಸಿ ಬರುವ ಯೋಜನೆಯಲ್ಲಿ ಹೊರಟಿದ್ದರು. ಪುಣ್ಯಕ್ಕೆ ಮಕ್ಕಳನ್ನು ಮನೆಯಲ್ಲೇ ಬಿಟ್ಟು ಬಂದಿದ್ದಕ್ಕೆ ಮಕ್ಕಳ ಜೀವ ಉಳಿಯಿತು.
ಮೃತರ ಪತ್ನಿಗೆ ಸೈರಸ್ ಆಸ್ಪತ್ರೆಯಲ್ಲಿ ಮುರಿದ ಕಾಲುಗಳ ಶಸ್ತ್ರಚಿಕಿತ್ಸೆ ನಡೆದಿತ್ತು. ಅದೂವರೆಗೂ ಗಂಡನ ಸಾವಿನ ಸುದ್ದಿ ಹೇಳದೇ ಗೌಪ್ಯವಾಗಿಡಲಾಗಿತ್ತು. ಆದರೆ, ಉಭಯಸಂಕಟದಿಂದ ಆಪರೇಷನ್ ಆಗಿ ಐಸಿಯು ಒಳಗೆ ನರಳಾಡುತ್ತಿರುವ ಪತ್ನಿಗೆ ಗಂಡನ ಸಾವಿನ ಸುದ್ದಿ ಯನ್ನು ಅವರ ಕುಟುಂಬದವರು ಹೇಳದೆಯೇ, ಮುಖವನ್ನು ತೋರಿಸದೆಯೇ ಮಣ್ಣು ಮಾಡುವುದು ಬೇಡ ಎಂದು ನಿರ್ಧರಿಸಿ ಆಸ್ಪತ್ರೆಗೆ ತೆರಳಿ ವೈದ್ಯರ ಅಪ್ಪಣೆ ಪಡೆದು ಮೃತ ಗಂಡನ ಪಾರ್ಥಿವ ವನ್ನು ಆಸ್ಪತ್ರೆಗೆ ಒಯ್ದು ಶವವಿದ್ದ ಸ್ಟ್ರಚರ್ ಬಳಿ ಪತ್ನಿಯ ಸ್ಟ್ರಚರ್ ಎಳೆತಂದು ಸಾವನ್ನಪ್ಪಿದ ಪತಿಯ ಕೊರಳಿಗೆ ಹೂವಿನ ಹಾರ ಹಾಕಿದ ದೃಶ್ಯ ಮಿಡಿಯುವಂತಿತ್ತು.
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…
ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…
ಹೀಟ್ ಸ್ಟ್ರೋಕ್ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…
ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…
ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…