ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್ಪಾಸ್ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.
ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.
ಕಳೆದ ಮೂರು ದಿನಗಳಿಂದ ನಡೆದ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ"ಗೆ ಭಾನುವಾರ ಅದ್ಧೂರಿಯಾಗಿ ತೆರೆ ಕಂಡಿತು. ಮೂರು ದಿನಗಳ ಕಾಲ ಲಕ್ಷಾಂತರ…
ಉತ್ತರಪ್ರದೇಶ : ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ…
ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…
ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…