ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್ಪಾಸ್ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.
ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…