ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ‌ ಹುಷಾರ್…! ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಸಕ್ರಿಯ: ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದು ವಿಕೃತಿ: ಟ್ರಾಫಿಕ್ ಪೊಲೀಸರಿಂದ ಮೊಳೆಗಳ ತೆರವು

ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ.‌ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.

ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.

ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.

ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ.  ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.

Ramesh Babu

Journalist

Recent Posts

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

45 minutes ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

4 hours ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

16 hours ago

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಚಾಲಕ

ದೊಡ್ಡಬಳ್ಳಾಪುರ: ತಾಲೂಕಿನ ಕೆಸ್ತೂರು ಗೇಟ್ ಸಮೀಪ ಹಾದುಹೋಗಿರುವ ದಾಬಸ್ ಪೇಟೆ - ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಕಾರೊಂದು ಚಾಲಕನ…

17 hours ago

ನೀಟ್ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಆಟವಾಡಿದ ಕೇಂದ್ರ ಸರ್ಕಾರ- ಟಿ. ವೆಂಕಟರಮಣಯ್ಯ ಆರೋಪ

ದೊಡ್ಡಬಳ್ಳಾಪುರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವತಿಯಿಂದ ದೊಡ್ಡಬಳ್ಳಾಪುರದಲ್ಲಿ…

19 hours ago

ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ…

19 hours ago