ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್ಪಾಸ್ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.
ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…