ವಾಹನ ಸವಾರರೇ ರಸ್ತೆಗಿಳಿಯುವ ಮುನ್ನ ಜೋಪಾನ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ಪಂಕ್ಚರ್ ಗ್ಯಾಂಗ್’ ಹೆಚ್ಚು ಸಕ್ರಿಯವಾಗಿದೆ. ಬೇಕಂತಲೇ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ಮೊಳೆ ಎಸೆದಿರುತ್ತಾರೆ. ಈ ಮೊಳೆಗಳು ವಾಹನಗಳ ಚಕ್ರಕ್ಕೆ ಚುಚ್ಚಿದರೆ ಹತ್ತಿರದಲ್ಲೇ ಇರುವ ಪಂಕ್ಚರ್ ಅಂಗಡಿಗಳಿಗೆ ಭರ್ಜರಿ ವ್ಯಾಪಾರವಂತೆ…!?.
ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್ಪಾಸ್ ರಸ್ತೆಯಲ್ಲಿ ಬಿದ್ದಿದ್ದ ಮೊಳೆಗಳನ್ನು ಆಯ್ದುಕೊಳ್ಳುತ್ತಿರುವ ದೃಶ್ಯ ಕಂಡುಬಂದಿದೆ.
ವಾಹನಗಳನ್ನು ಪಂಕ್ಚರ್ ಮಾಡುವ ಉದ್ದೇಶದಿಂದ ರಸ್ತೆಯಲ್ಲಿ ಲೋಹದ ಮೊಳೆಗಳನ್ನು ಎಸೆಯಲಾಗಿದೆ ಎಂದು ತಿಳಿದುಬಂದಿದೆ. ಇದನ್ನು ಗಮನಿಸಿದ ಸಂಚಾರ ಪೊಲೀಸರು ವಾಹನ ಚಾಲಕರ ಸುರಕ್ಷತೆ ದೃಷ್ಟಿಯಿಂದ ರಸ್ತೆಯಲ್ಲಿ ಎಸೆಯಲಾಗಿದ್ದ ಮೊಳೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ, ಮೊಳೆ ಎಸೆಯುವವರ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.
ಈ ದೃಶ್ಯಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಸೆದ ಲೋಹದ ಮೊಳೆಗಳನ್ನು ಆರಿಸುವುದನ್ನು ಇದು ತೋರಿಸುತ್ತದೆ. ಪೊಲೀಸರು ಮಾಡಿದ ಕೆಲಸವನ್ನು ಶ್ಲಾಘಿಸಲಾಗಿದೆ. ಜೊತೆಗೆ ತೊಂದರೆ ಸೃಷ್ಟಿಸಲು ಮೊಳೆ ಎಸೆದ ಅಪರಾಧಿಗಳನ್ನು ಖಂಡಿಸಿದ್ದಾರೆ.
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…
ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…
ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…
ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…
ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…