ನಿನ್ನೆ ನಡೆದ ಸಣ್ಣ ರಸ್ತೆ ಜಗಳವೊಂದನ್ನು ಭಾಷಾ ಸಂಘರ್ಷವೆಂಬಂತೆ ಬಿಂಬಿಸುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಕನ್ನಡ ಭಾಷೆ ಹಾಗೂ ಕನ್ನಡಿಗರ ಮೇಲೆ ಈ ರಾಷ್ಟ್ರೀಯ ಮಾಧ್ಯಮಗಳಿಗ್ಯಾಕೆ ಇಷ್ಟೊಂದು ದ್ವೇಷ? ಘಟನೆಯ ಪೂರ್ವಾಪರ ತಿಳಿಯದೇ ಅತಿರೇಕದ ವರದಿ ಮಾಡಿದ್ದು ಯಾವ ಸೀಮೆ ವೃತ್ತಿ ಧರ್ಮ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಹಲ್ಲೆಗೊಳಗಾದ ಕನ್ನಡಿಗ ವಿಕಾಸ್ ಕುಮಾರ್ ಒಬ್ಬ ಸಾಮಾನ್ಯ ಗಿಗ್ ಕಾರ್ಮಿಕ. ಜಗಳಕ್ಕೆ ಕಾರಣ ಏನೇ ಇರಲಿ, ಬಡಪಾಯಿ ಗಿಗ್ ಕಾರ್ಮಿಕನ ಮೇಲೆ ಶಿಲಾದಿತ್ಯ ಬೋಸ್ ಎರಗಿ ದಾಳಿ ಮಾಡಿದ ರೀತಿ ಮಾತ್ರ ಅಕ್ಷಮ್ಯ ಎಂದು ಹೇಳಿದ್ದಾರೆ.
ಕನ್ನಡಿಗ ಗಿಗ್ ಕಾರ್ಮಿಕ ವಿಕಾಸ್ ಕುಮಾರ್ ಗೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ತಪ್ಪಿತಸ್ಥ ಶಿಲಾದಿತ್ಯ ಬೋಸ್ ಹಾಗೂ ಅವರ ಪತ್ನಿ ಎಂಥದ್ದೇ ಹುದ್ದೆಯಲ್ಲಿರಲಿ, ಸೂಕ್ತ ಕಾನೂನು ಕ್ರಮ ಜರುಗಿಸದೇ ಬಿಡುವುದಿಲ್ಲ ಎಂದಿದ್ದಾರೆ.
ಹಾಗೆಯೇ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಸಗಿದ ಇಂತಹ ಕೃತ್ಯದಿಂದ ನಮ್ಮೆಲ್ಲರ ಹೆಮ್ಮೆಯ ಭಾರತೀಯ ವಾಯುಪಡೆಯ ಘನತೆ ಕುಗ್ಗದಿರಲಿ. ಪೂರ್ವಾಪರ ತಿಳಿದು ವರದಿ ಮಾಡುವ ವಿವೇಚನೆ ರಾಷ್ಟ್ರೀಯ ಮಾಧ್ಯಮಗಳಿಗೂ ಬರಲಿ ಎಂದು ತಿಳಿಸಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…