ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಕನ್ನಡಿಗನ ಮೇಲೆ ಹಲ್ಲೆ ಕೇಸ್- ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ಏನು..?

ನಿನ್ನೆ ನಡೆದ ಸಣ್ಣ ರಸ್ತೆ ಜಗಳವೊಂದನ್ನು ಭಾಷಾ ಸಂಘರ್ಷವೆಂಬಂತೆ ಬಿಂಬಿಸುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು ಎಂದು‌ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.

ಕನ್ನಡ ಭಾಷೆ ಹಾಗೂ ಕನ್ನಡಿಗರ ಮೇಲೆ ಈ ರಾಷ್ಟ್ರೀಯ ಮಾಧ್ಯಮಗಳಿಗ್ಯಾಕೆ ಇಷ್ಟೊಂದು ದ್ವೇಷ? ಘಟನೆಯ ಪೂರ್ವಾಪರ ತಿಳಿಯದೇ ಅತಿರೇಕದ ವರದಿ ಮಾಡಿದ್ದು ಯಾವ ಸೀಮೆ ವೃತ್ತಿ ಧರ್ಮ? ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಹಲ್ಲೆಗೊಳಗಾದ ಕನ್ನಡಿಗ ವಿಕಾಸ್ ಕುಮಾರ್ ಒಬ್ಬ ಸಾಮಾನ್ಯ ಗಿಗ್ ಕಾರ್ಮಿಕ. ಜಗಳಕ್ಕೆ ಕಾರಣ ಏನೇ ಇರಲಿ, ಬಡಪಾಯಿ ಗಿಗ್ ಕಾರ್ಮಿಕನ ಮೇಲೆ ಶಿಲಾದಿತ್ಯ ಬೋಸ್ ಎರಗಿ ದಾಳಿ ಮಾಡಿದ ರೀತಿ ಮಾತ್ರ ಅಕ್ಷಮ್ಯ ಎಂದು ಹೇಳಿದ್ದಾರೆ.

ಕನ್ನಡಿಗ ಗಿಗ್ ಕಾರ್ಮಿಕ ವಿಕಾಸ್ ಕುಮಾರ್ ಗೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ತಪ್ಪಿತಸ್ಥ ಶಿಲಾದಿತ್ಯ ಬೋಸ್ ಹಾಗೂ ಅವರ ಪತ್ನಿ ಎಂಥದ್ದೇ ಹುದ್ದೆಯಲ್ಲಿರಲಿ, ಸೂಕ್ತ ಕಾನೂನು ಕ್ರಮ ಜರುಗಿಸದೇ ಬಿಡುವುದಿಲ್ಲ ಎಂದಿದ್ದಾರೆ.

ಹಾಗೆಯೇ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಸಗಿದ ಇಂತಹ ಕೃತ್ಯದಿಂದ ನಮ್ಮೆಲ್ಲರ ಹೆಮ್ಮೆಯ ಭಾರತೀಯ ವಾಯುಪಡೆಯ ಘನತೆ ಕುಗ್ಗದಿರಲಿ. ಪೂರ್ವಾಪರ ತಿಳಿದು ವರದಿ ಮಾಡುವ ವಿವೇಚನೆ ರಾಷ್ಟ್ರೀಯ ಮಾಧ್ಯಮಗಳಿಗೂ ಬರಲಿ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 hour ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

3 hours ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

16 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

22 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

23 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

1 day ago