ನಿನ್ನೆ ನಡೆದ ಸಣ್ಣ ರಸ್ತೆ ಜಗಳವೊಂದನ್ನು ಭಾಷಾ ಸಂಘರ್ಷವೆಂಬಂತೆ ಬಿಂಬಿಸುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಕನ್ನಡ ಭಾಷೆ ಹಾಗೂ ಕನ್ನಡಿಗರ ಮೇಲೆ ಈ ರಾಷ್ಟ್ರೀಯ ಮಾಧ್ಯಮಗಳಿಗ್ಯಾಕೆ ಇಷ್ಟೊಂದು ದ್ವೇಷ? ಘಟನೆಯ ಪೂರ್ವಾಪರ ತಿಳಿಯದೇ ಅತಿರೇಕದ ವರದಿ ಮಾಡಿದ್ದು ಯಾವ ಸೀಮೆ ವೃತ್ತಿ ಧರ್ಮ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಹಲ್ಲೆಗೊಳಗಾದ ಕನ್ನಡಿಗ ವಿಕಾಸ್ ಕುಮಾರ್ ಒಬ್ಬ ಸಾಮಾನ್ಯ ಗಿಗ್ ಕಾರ್ಮಿಕ. ಜಗಳಕ್ಕೆ ಕಾರಣ ಏನೇ ಇರಲಿ, ಬಡಪಾಯಿ ಗಿಗ್ ಕಾರ್ಮಿಕನ ಮೇಲೆ ಶಿಲಾದಿತ್ಯ ಬೋಸ್ ಎರಗಿ ದಾಳಿ ಮಾಡಿದ ರೀತಿ ಮಾತ್ರ ಅಕ್ಷಮ್ಯ ಎಂದು ಹೇಳಿದ್ದಾರೆ.
ಕನ್ನಡಿಗ ಗಿಗ್ ಕಾರ್ಮಿಕ ವಿಕಾಸ್ ಕುಮಾರ್ ಗೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ತಪ್ಪಿತಸ್ಥ ಶಿಲಾದಿತ್ಯ ಬೋಸ್ ಹಾಗೂ ಅವರ ಪತ್ನಿ ಎಂಥದ್ದೇ ಹುದ್ದೆಯಲ್ಲಿರಲಿ, ಸೂಕ್ತ ಕಾನೂನು ಕ್ರಮ ಜರುಗಿಸದೇ ಬಿಡುವುದಿಲ್ಲ ಎಂದಿದ್ದಾರೆ.
ಹಾಗೆಯೇ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಸಗಿದ ಇಂತಹ ಕೃತ್ಯದಿಂದ ನಮ್ಮೆಲ್ಲರ ಹೆಮ್ಮೆಯ ಭಾರತೀಯ ವಾಯುಪಡೆಯ ಘನತೆ ಕುಗ್ಗದಿರಲಿ. ಪೂರ್ವಾಪರ ತಿಳಿದು ವರದಿ ಮಾಡುವ ವಿವೇಚನೆ ರಾಷ್ಟ್ರೀಯ ಮಾಧ್ಯಮಗಳಿಗೂ ಬರಲಿ ಎಂದು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…