ನಿನ್ನೆ ನಡೆದ ಸಣ್ಣ ರಸ್ತೆ ಜಗಳವೊಂದನ್ನು ಭಾಷಾ ಸಂಘರ್ಷವೆಂಬಂತೆ ಬಿಂಬಿಸುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಯತ್ನ ನಿಜಕ್ಕೂ ನಾಚಿಕೆಗೇಡು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಿಡಿಕಾರಿದ್ದಾರೆ.
ಕನ್ನಡ ಭಾಷೆ ಹಾಗೂ ಕನ್ನಡಿಗರ ಮೇಲೆ ಈ ರಾಷ್ಟ್ರೀಯ ಮಾಧ್ಯಮಗಳಿಗ್ಯಾಕೆ ಇಷ್ಟೊಂದು ದ್ವೇಷ? ಘಟನೆಯ ಪೂರ್ವಾಪರ ತಿಳಿಯದೇ ಅತಿರೇಕದ ವರದಿ ಮಾಡಿದ್ದು ಯಾವ ಸೀಮೆ ವೃತ್ತಿ ಧರ್ಮ? ಎಂದು ಪ್ರಶ್ನೆ ಮಾಡಿದ್ದಾರೆ.
ಇನ್ನು ಹಲ್ಲೆಗೊಳಗಾದ ಕನ್ನಡಿಗ ವಿಕಾಸ್ ಕುಮಾರ್ ಒಬ್ಬ ಸಾಮಾನ್ಯ ಗಿಗ್ ಕಾರ್ಮಿಕ. ಜಗಳಕ್ಕೆ ಕಾರಣ ಏನೇ ಇರಲಿ, ಬಡಪಾಯಿ ಗಿಗ್ ಕಾರ್ಮಿಕನ ಮೇಲೆ ಶಿಲಾದಿತ್ಯ ಬೋಸ್ ಎರಗಿ ದಾಳಿ ಮಾಡಿದ ರೀತಿ ಮಾತ್ರ ಅಕ್ಷಮ್ಯ ಎಂದು ಹೇಳಿದ್ದಾರೆ.
ಕನ್ನಡಿಗ ಗಿಗ್ ಕಾರ್ಮಿಕ ವಿಕಾಸ್ ಕುಮಾರ್ ಗೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ತಪ್ಪಿತಸ್ಥ ಶಿಲಾದಿತ್ಯ ಬೋಸ್ ಹಾಗೂ ಅವರ ಪತ್ನಿ ಎಂಥದ್ದೇ ಹುದ್ದೆಯಲ್ಲಿರಲಿ, ಸೂಕ್ತ ಕಾನೂನು ಕ್ರಮ ಜರುಗಿಸದೇ ಬಿಡುವುದಿಲ್ಲ ಎಂದಿದ್ದಾರೆ.
ಹಾಗೆಯೇ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ಎಸಗಿದ ಇಂತಹ ಕೃತ್ಯದಿಂದ ನಮ್ಮೆಲ್ಲರ ಹೆಮ್ಮೆಯ ಭಾರತೀಯ ವಾಯುಪಡೆಯ ಘನತೆ ಕುಗ್ಗದಿರಲಿ. ಪೂರ್ವಾಪರ ತಿಳಿದು ವರದಿ ಮಾಡುವ ವಿವೇಚನೆ ರಾಷ್ಟ್ರೀಯ ಮಾಧ್ಯಮಗಳಿಗೂ ಬರಲಿ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…