ವಾಹನ ಸವಾರರ ಅನುಕೂಲ ಹಾಗೂ ಶಬ್ಧ ಮಾಲಿನ್ಯ ತಡೆಯಲು ರಾಜ್ಯದಲ್ಲಿ ಇನ್ಮುಂದೆ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಬ್ರೇಕ್ ಬಿದ್ದಿದೆ. ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ(ಡಿಜಿ-ಐಜಿಪಿ) ಡಾ. ಎಂ.ಎ. ಸಲೀಂ ಮಹತ್ವದ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆ ಹಾಗೂ ಶಬ್ಧ ಮಾಲಿನ್ಯ ನಿಯಂತ್ರಣ ದೃಷ್ಟಿಯಿಂದ, ವಿಐಪಿ ಸಂಚಾರದ ಸಂದರ್ಭದಲ್ಲಿ ವಾಹನಗಳ ಸೈರನ್ ಬಳಕೆಗೆ ಕಡಿವಾಣ ಹಾಕುವಂತೆ ಎಲ್ಲಾ ಘಟಕಾಧಿಕಾರಿಗಳಿಗೆ ಸೂಚಿಸಲಾಗಿದೆ.
ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ ಎಂಬುದರ ಬಗ್ಗೆ ಅನಧಿಕೃತ ವ್ಯಕ್ತಿಗಳಿಗೆ ಮಾಹಿತಿ ರವಾನೆಯಾಗುವುದಲ್ಲದೆ ಗಣ್ಯ ವ್ಯಕ್ತಿಗಳಿಗೆ ಅಪಾಯ ಉಂಟಾಗುವ ಸಾಧ್ಯತೆ ಇರುತ್ತದೆ. ಇದಲ್ಲದೆ. ಅನಗತ್ಯ ಸೈರನ್ ಬಳಕೆಯಿಂದ ಸಾರ್ವಜನಿಕರಿಗೆ ತೊಂದರೆಯಾಗುವುದಲ್ಲದೇ ಶಬ್ದ ಮಾಲಿನ್ಯವೂ ಉಂಟಾಗುತ್ತದೆ. ಸಾರ್ವಜನಿಕ ರಸ್ತೆಗಳ ಮೇಲೆ ಹಠಾತ್ತಾಗಿ ಸೈರನ್ ಬಳಸುವುದರಿಂದ ಇತರ ವಾಹನ ಚಾಲಕರಿಗೆ ದ್ವಂದ್ವ ಉಂಟಾಗಿ ಯಾವ ಕಡೆಗೆ ಚಲಿಸಬೇಕೆಂಬುದು ತಿಳಿಯದೆ ವಾಹನವನ್ನು ಅಡ್ಡಾದಿಡ್ಡಿಯಾಗಿ ಚಲಿಸಿ ಬೆಂಗಾವಲು ಮತ್ತು ಇತರ ವಾಹನಗಳಿಗೆ ಗೊಂದಲ ಉಂಟುಮಾಡುವ ಸಾಧ್ಯತೆಯೂ ಇರುತ್ತದೆ.
ವಿಐಪಿ ಸಂಚಾರದ ವೇಳೆ, ವಾಹನಗಳ ತುರ್ತು ಚಲನವಲನದ ಅವಶ್ಯಕತೆಗಳಿಗೆ ಅನುಗುಣವಾಗಿ ದೂರಸಂಪರ್ಕ ಸಾಧನಗಳಾದ ವೈರ್ಲೆಸ್ ಕಮ್ಯುನಿಕೇಶನ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಉಪಯೋಗಿಸುವುದು ಹೆಚ್ಚು ಶಿಸ್ತಿನ ಹಾಗೂ ಸುರಕ್ಷಿತ ಮಾರ್ಗವಾಗಿದೆ.
ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗೆ ಸೂಚಿಸಲಾಗಿದೆ.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…