ವಿಕಲಚೇತನರಿಗೆ ಉಚಿತ ಕಾನೂನು ನೆರವು- ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ

ಕಾನೂನು ಸೇವಾ ಪ್ರಾಧಿಕಾರಕ್ಕೆ ಸಬಂಧಪಟ್ಟಂತೆ ಎಲ್ಲಾ ವಿಕಲಚೇತನರಿಗೂ ಉಚಿತ ಕಾನೂನು‌ ನೆರವು ನೀಡಲಾಗುವುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ್ ಭೀಮಸೇನ ಬಾಗಡಿ ಅವರು ತಿಳಿಸಿದರು.

ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು

ರಾಷ್ಟ್ರೀಯ ಕಾನೂನು ಸೇವಾ ಅಧಿನಿಯಮ 1987 ಕಾಲಂ 12ರಡಿಯಲ್ಲಿ ಎಲ್ಲಾ ವಿಕಲಚೇತನರಿಗೂ ಉಚಿತ ಕಾನೂನು ಅರಿವು ನೆರವು ನೀಡಲಾಗುತ್ತದೆ. ದೈಹಿಕ ನ್ಯೂನತೆಯಿಂದ ಬಳಲುತ್ತಿದ್ದು ಕಛೇರಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ ಸಹಾಯವಾಣಿ 15100 ಕರೆ ಮಾಡಬಹುದು.ಸರ್ಕಾರಿ ಸೌಲಭ್ಯ ಪಡೆಯಲು ಕಚೇರಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ ಕಾನೂನು ಸೇವಾ ಸಮಿತಿಯಿಂದ ಅರೆಕಾಲಿಕ ನ್ಯಾಯಿಕ ಸ್ವಯಂ ಸೇವಕರು ಮನೆ ಬಾಗಿಲಿಗೆ ಬಂದು ನಿಮ್ಮ ‌ಅರ್ಜಿಗಳನ್ನು ಇಲಾಖೆಗೆ ಅರ್ಜಿ ಸಲ್ಲಿಸಿ ಕಾಲಕಾಲಕ್ಕೆ ಮಾಹಿತಿ ನೀಡುತ್ತಾರೆ.

ಕೇಂದ್ರ ಸರ್ಕಾರವು 2016ರಲ್ಲಿ ವಿಕಲಚೇತನರ ಹಕ್ಕುಗಳನ್ನು ಕಾಪಾಡಲು ಕಾನೂನನ್ನು ಜಾರಿಗೆ ತಂದಿದೆ. ಜನಸಾಮಾನ್ಯರಿಗೆ ಕಾಯಿದೆಯ ಬಗ್ಗೆ ತಿಳುವಳಿಕೆಯಿಲ್ಲದ ಕಾರಣ ಸಂಪೂರ್ಣವಾಗಿ ಅನುಷ್ಠಾನಕ್ಕೆ ಬಂದಿರುವುದಿಲ್ಲ.‌ಈ ಕಾಯಿದೆ ಪ್ರಕಾರ ಸರ್ಕಾರಿ ನೇಮಕಾತಿಗಳಲ್ಲಿ 4% ಮೀಸಲಾತಿ ನೀಡಬೇಕು. ಶಾಲೆಗಳಲ್ಲಿ 5% ಮೀಸಲಾತಿ ವಿಕಲ ಚೇತನರ ಮಕ್ಕಳಿಗೆ ನೀಡಬೇಕು.ಯಾವುದೇ ಸರ್ಕಾರಿ, ಖಾಸಗಿ ಕಟ್ಟಡಗಳ ಕಛೇರಿಗಳಲ್ಲಿ ವಿಕಲಚೇತನರಿಗೆ ವ್ಹೀಲ್ ಚೇರ್ ನೀಡಬೇಕಾಗುತ್ತದೆ. ಕಾನೂನು ಹಾಗೂ ಅದರ ಸದುಪಯೋಗದ ಕುರಿತು ವಿಸ್ತಾರವಾಗಿ ಮಾಹಿತಿ ಹಂಚಿಕೊಂಡರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು‌ ಮಾತನಾಡಿ ಈ ದಿನದ ವಿಕಲಚೇತನರ ದಿನಾಚರಣೆಯನ್ನು ವಿಶ್ವಸಂಸ್ಥೆಯು ಸಾಮಾಜಿಕ ಪ್ರಗತಿಯನ್ನು ಮುನ್ನೆಡಸಲು ಅಂಗವಿಕಲರನ್ನೊಳಗೊಂಡ ಸಮಾಜವನ್ನು ಪೋಷಿಸುವುದು ಎಂಬ ಧ್ಯೇಯವಾಕ್ಯದೊಂದಿಗೆ ಎಲ್ಲಾ ವಿಕಲಚೇನರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಈ ಕಾರ್ಯ ಕ್ರಮವನ್ನು ನಡೆಸಲಾಗುತ್ತದೆ. ಹಿರಿಯ ನಾಗರೀಕರಿಗೆ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ಹಿರಿಯ ನಾಗರೀಕರಿಗೆ ವಿಕಲಚೇತನರಿಗೆ ಸಿಎಸ್ಆರ್ ವತಿಯಿಂದ ಅನುದಾನ ನೀಡಲಾಗುತ್ತಿದೆ.ಜಿಲ್ಲಾ ವ್ಯಾಪ್ತಿಯಲ್ಲಿ ಹಿರಿಯ ನಾಗರೀಕರಿಗೆ ವಿಶೇಷ ಶಿಬಿರಗಳನ್ನು ನಡೆಸಲಾಗಿದೆ. ವಿಶೇಷ ಚೇತನರು ತಮ್ಮಲ್ಲಿರುವ ಪ್ರತಿಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಿ. ಹೆಚ್ಚು ಹೆಚ್ಚು ಸರ್ಕಾರಿ ಹುದ್ದೆಗಳಲ್ಲಿ ಬರಲು ಪ್ರಯತ್ನಿಸಿ. ಸಹಾಯ ಮಾಡಲು ಜಿಲ್ಲಾಡಳಿತ ಸಿದ್ದವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆಯ ನಾಲ್ಕು ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರುಗಳಿಗೆ ಕಂಪ್ಯೂಟರ್ ನೀಡಲಾಯಿತು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಮತ್ತು ವಿಕಲಚೇತನ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು ಹಾಗೂ ವಿಕಲಚೇತನ ಮಕ್ಕಳಿಗೆ ವಿವಿಧ ಕ್ರೀಡೆ ಮತ್ತು ಸಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ಅದರಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ,ಆಲೂರು ದುದ್ದನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ಜಯಲಕ್ಷ್ಮಮ್ಮ, ಉಪಾಧ್ಯಕ್ಷರಾದ ಪಿ.ಮುನಿರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಮುದ್ದಣ್ಣ. ಎಂ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ ಪಾಣಿ, ಜಿಲ್ಲಾ ನಿರೂಪಣ ಅಧಿಕಾರಿ ಅನಿತಾಲಕ್ಷ್ಮಿ, ತಾಲೂಕಿನ ಸಿಡಿಪಿಓಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು ಹಾಗೂ ವಿಶೇಷಚೇತನರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

7 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

10 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

18 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

19 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago