ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ

ಸಮಾಜದಲ್ಲಿ ವಿಶೇಷಚೇತನರನ್ನು ಮತ್ತು ಹಿರಿಯ ನಾಗರಿಕರನ್ನು ಗೌರವಿಸುವ ಪ್ರವೃತ್ತಿ ಹೆಚ್ಚಾಗಬೇಕು ಜೊತೆಗೆ ಅವರನ್ನು ಗೌರವಯುತವಾಗಿ ಬದುಕು ನಡೆಸಲು ನಾವೆಲ್ಲರು ಸಹಕಾರ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆ,
ಅಲಿಂಕೋ ಸಂಸ್ಥೆ ಸಹಯೋಗ ಆಯೋಜಿಸಿದ್ದ ಹಾಗೂ ಸಿಎಸ್ಆರ್ ಅನುದಾನದಡಿ ವಿಕಲಚೇತನರಿಗೆ ಮತ್ತು ಹಿರಿಯ ನಾಗರಿಕರಿಗೆ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು

ವಿಶೇಷಚೇತನರಲ್ಲಿ ತನ್ನದೇ ಅದ ವಿಶಿಷ್ಟ ಕಲೆ, ಶಕ್ತಿ ಇರುತ್ತದೆ ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಸಮಾನತೆ, ಗೌರವಯುತವಾಗಿ ನೋಡಬೇಕು. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಒದಗಿಸಬೇಕು. ಅಲಿಂಕೊ ಸಂಸ್ಥೆಯು ಉತ್ತಮ ಕೆಲಸ ಮಾಡಿದ್ದು ಅವರಿಗೆ ಧನ್ಯವಾದ.

149 ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಸಿಎಸ್ಆರ್ ಅನುದಾನದಲ್ಲಿ 44.71ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮತ್ತು 161 ವಿಕಲಚೇತನರಿಗೆ ಅಡಿಪ್ ಯೋಜನೆಯಡಿ 12.55 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಹಾಗೂ 83 ಹಿರಿಯ ನಾಗರಿಕರಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 6.88 ಲಕ್ಷ ಮೌಲ್ಯದ ಸಾಧನ ಸಲಕರಣೆ ವಿತರಣೆ ಮಾಡಲಾಗಿದ್ದು ಒಟ್ಟಾರೆ 393 ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗೆ 64 ಲಕ್ಷ ಮೌಲ್ಯದ ವೀಲ್ಚೇರ್, ಯಂತ್ರಚಾಲಿತ ವೀಲ್ ಚೇರ್, ಕ್ರಚರ್ಸ್, ಕ್ಯಾಲಿಪರ್ಸ್ ವಾಕರ್, ಶ್ರವಣ ಸಾಧನ ಹಾಗೂ ಇತರೆ ಅಗತ್ಯವಿರುವ ಸಾಧನ ಸಲಕರಣೆಗಳನ್ನು ನೀಡಲಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ಯುಟಿಐ ಮತ್ತು ಐ.ಟಿ.ಎಸ್.ಎಲ್ ಸಂಸ್ಥೆಯ ಪ್ರಾದೇಶಿಕ ವ್ಯವಸ್ಥಾಪಕರಾದ ಬಾಸ್ಟಿನ್ ಪಾಲ್ ಹಾಗೂ ಬೆಂಗಳೂರು ವಿಭಾಗದ ಮ್ಯಾನೇಜರ್ ಮಹೇಶ್ವರಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಅನಿತಾ ಲಕ್ಷ್ಮೀ, ಅಲಿಂಕೋ ಸಂಸ್ಥೆಯ ಮ್ಯಾನೇಜರ್ ಎ.ಶಿವಕುಮಾರ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಕಲಚೇತನರು ಮತ್ತು ಹಿರಿಯ ನಾಗರಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

4 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

15 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

15 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

20 hours ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago