ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ ಎಲ್ಲರಲ್ಲೂ ಒಂದಲ್ಲ ಒಂದು ನ್ಯೂನತೆ ಇದ್ದೇ ಇರುತ್ತದೆ. ವಿಶೇಷಚೇತನರಲ್ಲಿ ವಿಶೇಷ ಪ್ರತಿಭೆ ಇರುತ್ತದೆ, ಅದನ್ನು ಗುರುತಿಸಿ ಪೋಷಿಸಿದರೆ ಸಾಧನೆ ಮಾಡಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ವಿಶ್ವ ವಿಕಲಚೇತನರ ದಿನಾಚರಣೆ ಆಚರಣೆಯ ಸಮಿತಿ ಅಧ್ಯಕ್ಷರಾದ ಅಮರೇಶ್.ಹೆಚ್ ಅವರು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳು ಇವರ ಸಹಯೋಗದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯೂನತೆಗಳನ್ನು ಸಕಾಲದಲ್ಲಿ ಗುರುತಿಸಿದರೆ ಗುಣಪಡಿಸುವ ಸಾಧ್ಯತೆಯಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಕಲಚೇತನರ ಕುಂದು ಕೊರತೆ ಸಭೆಗಳನ್ನು ನಡೆಸಲು ಪ್ರಯತ್ನಿಸಲಾಗುತ್ತಿದೆ. ಈ ಮೂಲಕ ಅವರ ದೂರು ಮತ್ತು ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಕ್ರಮವಹಿಸಲಾ ಗುತ್ತಿದೆ ಎಂದರು.
ವಿಕಲಚೇತನರ ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವವರಿಗೆ ಅಭಿನಂದಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಅನಿತಾಲಕ್ಷ್ಮೀ ಮಾತನಾಡಿ, ವಿಕಲಚೇತನರಲ್ಲಿ ಉತ್ಸಾಹವಿದೆ.
ವಿಕಲಚೇತನರನ್ನು ಸಮಾಜದ ಮುನ್ನೆಲೆಗೆ ತರುವ ಉದ್ದೇಶದಿಂದ ವಿಕಲಚೇತನರ ದಿನಾಚರಣೆ ಆರಂಭಿಸಲಾಯಿತು. ದೇಶದ ಅಭಿವೃದ್ಧಿಗೆ ವಿಕಲಚೇತನರ ಕೊಡುಗೆ ಇದೆ. ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಕಲಚೇತನರು ಸಾಧನೆ ಮಾಡುತ್ತಿದ್ದಾರೆ ಎಲ್ಲರೂ ಕೂಡ ತಮ್ಮ ವೈಫಲ್ಯ ಮರೆತು ನಿರಂತರ ಶ್ರಮದಿಂದ ಯಶಸ್ಸು ಗಳಿಸಿಕೊಳ್ಳಬಹುದೆಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಪುನರ್ವಸತಿ ಕಾರ್ಯಕರ್ತರನ್ನು ಹಾಗೂ ಜಿಲ್ಲೆಯಲ್ಲಿ ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆ, ವ್ಯಕ್ತಿಗಳನ್ನು ಅಭಿನಂದಿಸಲಾಯಿತು.
ತಾಲ್ಲೂಕು ಮಟ್ಟದಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿಕಲಚೇತನರಿಗೆ ಪ್ರಥಮ, ದ್ವಿತೀಯ, ತೃತೀಯ, ಬಹುಮಾನ ವಿತರಿಸಲಾಯಿತು. ವಿಕಲಚೇತನರಿಗೆ ಇರುವ ಸೌಲಭ್ಯಗಳ ಬಗ್ಗೆ ಹಾಗೂ ಕಾಯ್ದೆ ಕಾನೂನುಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳ ಮೂಲಕ ಅರಿವು ಮೂಡಿಸಲಾಯಿತು. ಆರೋಗ್ಯ ಇಲಾಖೆ ವತಿಯಿಂದ ವಿಕಲಚೇತನರಿಗೆ ಉಚಿತವಾಗಿ ವೈದ್ಯಕೀಯ ತಪಾಸಣೆ ನಡೆಸಲಾಯಿತು.
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…