ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧ-ಸಿಎಂ ಸಿದ್ದರಾಮಯ್ಯ

ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದೆ ಎಂದರು.

ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400/- ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000/- ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

1 hour ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

5 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

7 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

9 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago