ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದ್ದು, ಅವರ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನ ಪೂರಕ ಅಂದಾಜಿನಲ್ಲಿ 44 ಕೋಟಿಗಳನ್ನು ಮಂಜೂರು ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಸುಮಾರು 15 ಲಕ್ಷ ವಿಕಲಚೇತನರಿದ್ದಾರೆ. ಇವರೆಲ್ಲರ ಆರೈಕೆ ಮಾಡಿ ವಿಶೇಷ ಸೌಲಭ್ಯಗಳನ್ನು ನೀಡುವುದು ಸರ್ಕಾರದ ಕರ್ತವ್ಯ. ಸಂವಿಧಾನದಲ್ಲಿ ಎಲ್ಲರೂ ಬದುಕುವ, ಉದ್ಯೋಗ ಪಡೆಯುವಂತಹ ಅವಕಾಶವನ್ನು ಕಲ್ಪಿಸಿದೆ. ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ. ಅವರು ಸಮಾಜದ ಆಸ್ತಿಯಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಪ್ಯಾರಾ ಒಲಂಪಿಕ್ಸ್ ನಲ್ಲಿ ಭಾರತದ ವಿಕಲಚೇತನ ಕ್ರೀಡಾಪಟುಗಳು ಹೆಚ್ಚಿನ ಪದಕಗಳನ್ನು ಪಡೆದಿರುವುದು ಹೆಮ್ಮೆಯ ವಿಚಾರ. ನಮ್ಮ ಸರ್ಕಾರ ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸುತ್ತಿದೆ ಎಂದರು.
ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಪ್ರತಿ ಮಾಹೆ 1000 ರೂ. ಗಳ ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿ ಪ್ರಪ್ರಥಮವಾಗಿ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ ನೀಡಲಾಗುವುದು. ಪ್ರಸಕ್ತ ಸಾಲಿನಲ್ಲಿ 7 ಜಿಲ್ಲೆಗಳಲ್ಲಿ ರೂ. 2 ಕೋಟಿ ವೆಚ್ಚದಲ್ಲಿ 10 ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಗಳನ್ನು ಪ್ರಾರಂಭಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಣೆಯಂತೆ ಶಾಲೆಗಳನ್ನು ತೆರೆಯಲಾಗಿದೆ. ಇದಲ್ಲದೇ ಇನ್ನೂ 13 ಹೊಸ ಶಾಲೆಗಳನ್ನು ಪ್ರಸಕ್ತ ಸಾಲಿನಲ್ಲಿ ಅನುದಾನಕ್ಕೆ ಒಳಪಡಿಸಲಾಗಿದೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತರ ಅವಲಂಬಿತರಿಗೆ ನೀಡಲಾಗುವ ಮರಣ ಪರಿಹಾರ ನಿಧಿಯನ್ನು 2023ನೇ ಸಾಲಿನಲ್ಲಿ ರೂ. 50,000/- ದಿಂದ ಪರಿಷ್ಕರಿಸಿ ರೂ.1.00 ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿದರು.
ಸರ್ಕಾರಿ ಉದ್ಯೋಗಗಳಲ್ಲಿ ‘ಸಿ’ ಮತ್ತು ‘ಡಿ’ ಸಮೂಹದ ಹುದ್ದೆಗಳಲ್ಲಿ ಶೇ.5 ಹಾಗೂ ‘ಎ’ ಮತ್ತು ‘ಬಿ’ ಹುದ್ದೆಗಳಲ್ಲಿ ಶೇ.4ರಷ್ಟು ಮೀಸಲಾತಿಯನ್ನು ನೀಡಲಾಗಿದೆ. ಅಲ್ಲದೇ ಇವರು ನಿರ್ವಹಿಸಬಹುದಾದಂತಹ ಹುದ್ದೆಗಳನ್ನು ಗುರುತಿಸಲು ರಾಜ್ಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು ಇಲಾಖೆಗಳಲ್ಲಿನ ಹುದ್ದೆಗಳನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ. ವಿಕಲಚೇತನರ ಅನುಕೂಲಕ್ಕಾಗಿ ವಾಹನಗಳನ್ನು ನೀಡಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.
ಸಾಮಾಜಿಕ ಸಬಲೀಕರಣಕ್ಕಾಗಿ ಸಹ ಶೇಕಡಾ 40 ರಿಂದ 74 ವಿಕಲಚೇತನರಿಗೆ ರೂ. 800/- ಹಾಗೂ 75% ಮತ್ತು ಅದಕ್ಕಿಂತ ಹೆಚ್ಚಿನ ಅಂಗವೈಕಲ್ಯತೆವುಳ್ಳವರಿಗೆ ರೂ. 1400/- ಮತ್ತು ತೀವ್ರತರನಾದ ಮನೋವೈಕಲ್ಯತೆ ಇರುವ ವ್ಯಕ್ತಿಗಳಿಗೆ ರೂ. 2000/- ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ನೀಡಲಾಗುವ ವಿಕಲಚೇತನರ ಮಾಸಾಶನ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಸರ್ಕಾರ ಬರೆಯಲು ಕ್ರಮ ಕೈಗೊಳ್ಳಲಿದೆ. ವಿಕಲಚೇತನರ ಸಬಲೀಕರಣಕ್ಕಾಗಿ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…