ವಿಕಲಚೇತನರ ಸೌಲಭ್ಯ ಕಲ್ಪಿಸಲು ಹಣ ಕೇಳುವವರ ವಿರುದ್ಧ ದೂರು ದಾಖಲಿಸಿ- ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನಗಳನ್ನು ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತಿದ್ದು ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗಧಿಪಡಿಸಿರುವುದಿಲ್ಲ, ಆದರೆ ಮಧ್ಯವರ್ತಿಗಳು ಸೌಲಭ್ಯ ದೊರಕಿಸಿಕೊಡುವುದಾಗಿ ಫಲಾನುಭವಿಗಳನ್ನು ನಂಬಿಸಿ ಹಣ ವಸೂಲಿ ಮಾಡುತ್ತಿರುವ ಜಾಲ ಕಂಡುಬಂದಿರುತ್ತದೆ.

ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನ ಯೋಜನೆಯು ಸೇರಿದಂತೆ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿದ್ದು, ಈ ರೀತಿಯಲ್ಲಿ ಸೌಲಭ್ಯಕ್ಕಾಗಿ ಹಣ ಕೇಳುವ ಯಾವುದೇ ವ್ಯಕ್ತಿ ಅಥವಾ ಜಾಲ ತಮ್ಮ ಗಮನಕ್ಕೆ ಬಂದರೆ ಕೂಡಲೇ ಕಡ್ಡಾಯವಾಗಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಾಗೂ ಇಲಾಖೆಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ-080-29787441 ಗೆ  ಮಾಹಿತಿ ನೀಡಿ.

ಇಲಾಖಾ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

5 hours ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

6 hours ago

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

19 hours ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

20 hours ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

22 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

22 hours ago