ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ವಿಕಲಚೇತನರ ಶ್ರೇಯೋಭಿವೃದ್ದಿಗಾಗಿ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನಗಳನ್ನು ಫಲಾನುಭವಿಗಳಿಗೆ ಸಂಪೂರ್ಣ ಉಚಿತವಾಗಿ ವಿತರಿಸಲಾಗುತ್ತಿದ್ದು ಇಲಾಖೆಯಿಂದ ಯಾವುದೇ ರೀತಿಯ ಶುಲ್ಕವನ್ನು ನಿಗಧಿಪಡಿಸಿರುವುದಿಲ್ಲ, ಆದರೆ ಮಧ್ಯವರ್ತಿಗಳು ಸೌಲಭ್ಯ ದೊರಕಿಸಿಕೊಡುವುದಾಗಿ ಫಲಾನುಭವಿಗಳನ್ನು ನಂಬಿಸಿ ಹಣ ವಸೂಲಿ ಮಾಡುತ್ತಿರುವ ಜಾಲ ಕಂಡುಬಂದಿರುತ್ತದೆ.
ವಿಕಲಚೇತನರ ಯಂತ್ರಚಾಲಿತ ಮೋಟಾರು ವಾಹನ ಯೋಜನೆಯು ಸೇರಿದಂತೆ ಇಲಾಖೆಯ ಎಲ್ಲಾ ಯೋಜನೆಗಳು ಸಂಪೂರ್ಣ ಉಚಿತವಾಗಿದ್ದು, ಈ ರೀತಿಯಲ್ಲಿ ಸೌಲಭ್ಯಕ್ಕಾಗಿ ಹಣ ಕೇಳುವ ಯಾವುದೇ ವ್ಯಕ್ತಿ ಅಥವಾ ಜಾಲ ತಮ್ಮ ಗಮನಕ್ಕೆ ಬಂದರೆ ಕೂಡಲೇ ಕಡ್ಡಾಯವಾಗಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲು ಹಾಗೂ ಇಲಾಖೆಯ ವಿಕಲಚೇತನರ ಸಹಾಯವಾಣಿ ದೂರವಾಣಿ ಸಂಖ್ಯೆ-080-29787441 ಗೆ ಮಾಹಿತಿ ನೀಡಿ.
ಇಲಾಖಾ ಸೌಲಭ್ಯಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಮಾಹಿತಿ ಸಲಹಾ ಕೇಂದ್ರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾಡಳಿತ ಭವನ ಬೀರಸಂದ್ರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ದೂರವಾಣಿ ಸಂಖ್ಯೆ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…