ವಿಕಲಚೇತನರ 08 ಫಲಾನುಭವಿ ಆಧಾರಿತ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 08 ಫಲಾನುಭವಿ ಆಧಾರಿತ ಯೋಜನೆಗಳನ್ನು ಸೇವಾ ಸಿಂಧು (ಡಿ.ಬಿ.ಟಿ-ನೇರ ನಗದು ವರ್ಗಾವಣೆ) ತಂತ್ರಾಂಶದಡಿ ಅನುಷ್ಠಾನಗೊಳಿಸಲಾಗಿರುತ್ತದೆ.

ಆಧಾರ ಯೋಜನೆ, ಮೆರಿಟ್‌ ವಿದ್ಯಾರ್ಥಿಗಳಿಗಾಗಿ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ. ಈ 08 ಯೋಜನೆಗಳನ್ನು ಸೇವಾ ಸಿಂಧು ಮೂಲಕ ಲೈವ್ ಮಾಡಲಾಗಿದೆ.

2023-24ನೇ ಸಾಲಿಗೆ 08 ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್‌ನಲ್ಲಿ (https://sevasindhu.karnataka.gov.in/Sevasindhu/Department Services) ಮೂಲಕ ಅಗತ್ಯ ದಾಖಲಾತಿಗಳೊಂದಿಗೆ ಡಿಸೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ಅರ್ಹ ವಿಕಲಚೇತನರು ಈ ಯೋಜನೆಗಳ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಮಾಹಿತಿ ಸಲಹಾ ಕೇಂದ್ರದ ದೂ.ಸಂ 080-29787441 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ.ಎನ್.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

8 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

15 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

15 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago