ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 hour ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

4 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

7 hours ago

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಮುಸ್ಲಿಂ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…

8 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

10 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

10 hours ago