ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

2 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

17 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago