ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮದುವೆಯಾದ 45 ದಿನಕ್ಕೆ ಲವರ್​​ ಜೊತೆ ಯುವತಿ ಎಸ್ಕೇಪ್​​: ಪತಿ, ಸೋದರ ಮಾವ ಸೂಸೈಡ್

  ಮದುವೆಯಾದ 45 ದಿನಕ್ಕೆ ನವವಿವಾಹಿತ ಪತ್ನಿಯಿಂದ ಕಿರುಕುಳ ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತ್ನಿಯ ವರ್ತನೆಯೇ ಸಾವಿಗೆ ಕಾರಣ ಎಂದು…

8 hours ago

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

11 hours ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

11 hours ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

12 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

13 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

18 hours ago