ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago