ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

5 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

6 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

10 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

14 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

18 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago