ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ವಿಕಸಿತ ಭಾರತಕ್ಕಾಗಿ ಒಂದಾಗಿ ಕೈ ಜೋಡಿಸಿದ್ದಾರೆ. ಅದೇ ರೀತಿ ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು ಎಂಬ ಸಂದೇಶ ರವಾನೆಯಾಗಿದೆ. ಅದರಂತೆ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಸಮನ್ವಯ ಸಭೆಗಳು ನಡೆಯುತ್ತಿದ್ದು, ಎಲ್ಲರೂ ಒಂದಾಗಿ ಕೆಲಸ ಮಾಡುವ ಪಣ ತೊಟ್ಟಿದ್ದಾರೆ.

ಸೋಮವಾರ ಡಾ.ಕೆ.ಸುಧಾಕರ್‌ ಅವರು ಚುನಾವಣಾ ಕಾರ್ಯಾಲಯಕ್ಕೆ ತೆರಳಿ ನಾಮಪತ್ರ ಸಲ್ಲಿಸಿದರು. ಮಾಜಿ ಸಚಿವ ಎಂಟಿಬಿ ನಾಗರಾಜ್‌, ಶಾಸಕ ಧೀರಜ್‌ ಮುನಿರಾಜು, ಜೆಡಿಎಸ್‌ ಮುಖಂಡರಾದ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಮಾಜಿ ಎಂಎಲ್‌ಸಿ ಇ.ಕೃಷ್ಣಪ್ಪ ಅವರೊಂದಿಗೆ ನಾಮಪತ್ರ ಸಲ್ಲಿಸಿದ ಅವರು ಎಲ್ಲರ ಸಹಕಾರವನ್ನು ಕೋರಿದರು. ಇದಕ್ಕೂ ಮುನ್ನ ಮನೆ ದೇವರಾದ ಚನ್ನಕೇಶವಸ್ವಾಮಿ ಹಾಗೂ ಭೋಗನಂದೀಶ್ವರನ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.

*ಸಮನ್ವಯ ಸಭೆ*

ಬಳಿಕ ದೇವನಹಳ್ಳಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ನಡೆದ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಮನ್ವಯ ಸಭೆಯಲ್ಲಿ ಡಾ.ಕೆ.ಸುಧಾಕರ್‌ ಮಾತನಾಡಿದರು.

ನೆಲ, ಜಲ, ಭಾಷೆಯ ವಿಚಾರದಲ್ಲಿ ಸದಾ ಜನರ ಪರವಾಗಿ ಕೆಲಸ ಮಾಡುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನರೇಂದ್ರ ಮೋದಿಯವರೊಂದಿಗೆ ಕೈ ಜೋಡಿಸಲು ತೀರ್ಮಾನಿಸಿದ್ದಾರೆ. ಮೋದಿಯವರಿಂದ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಅರಿತಿರುವ ಈ ನಾಯಕರು ಬಿಜೆಪಿ ಜೊತೆ ಶಾಶ್ವತ ಮೈತ್ರಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಇದನ್ನು ನಾವೆಲ್ಲರೂ ಒಕ್ಕೊರಲಿನಿಂದ ಬೆಂಬಲಿಸಿದ್ದೇವೆ. ಬಿಜೆಪಿ-ಜೆಡಿಎಸ್‌ ಗುರುತಾದ ಕೇಸರಿ ಮತ್ತು ಹಸಿರು ದೇಶದ ಮತ್ತು ರಾಜ್ಯದ ಉಸಿರಾಗಿದೆ ಎಂದರು.

ರಾಜ್ಯದ ಕಾಂಗ್ರೆಸ್‌ ನೀಡುವ ಗ್ಯಾರಂಟಿಗೂ ಕೇಂದ್ರ ಸರ್ಕಾರ ನೀಡುವ ಗ್ಯಾರಂಟಿಗೂ ವ್ಯತ್ಯಾಸವಿದೆ. ಕಾಂಗ್ರೆಸ್‌ ಎಂದರೆ ಕಿತ್ತುಕೊಳ್ಳುವ ಸರ್ಕಾರ. ಬಿಜೆಪಿ ಸರ್ಕಾರ ನೀಡಿದ ಕಿಸಾನ್‌ ಸಮ್ಮಾನ್‌, ರೈತ ವಿದ್ಯಾನಿಧಿ, ದಲಿತರ 11 ಸಾವಿರ ಕೋಟಿ ರೂಪಾಯಿಯನ್ನು ಕಾಂಗ್ರೆಸ್‌ ಕಿತ್ತುಕೊಂಡಿದೆ. ಪ್ರಧಾನಿ ಮೋದಿಯವರು ಮಹಿಳೆಯರಿಗೆ 11 ಕೋಟಿ ಶೌಚಾಲಯ, ಉಚಿತ ಅನಿಲ ಸಿಲಿಂಡರ್‌, ರೈತರಿಗಾಗಿ ಫಸಲ್‌ ಬಿಮಾ ಯೋಜನೆ ನೀಡಿದ್ದಾರೆ. ಕಾಂಗ್ರೆಸ್‌ ಗ್ಯಾರಂಟಿ ಎಂದರೆ ಹಬ್ಬಕ್ಕೆ ಮಾತ್ರ ಊಟ ನೀಡುವ ಗ್ಯಾರಂಟಿ. ಆದರೆ ಮೋದಿಯವರ ಗ್ಯಾರಂಟಿ ಎಂದರೆ ಬದುಕನ್ನು ಕಟ್ಟಿಕೊಡುವ ಗ್ಯಾರಂಟಿ ಎಂದರು.

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರು ಹಾಲು ಜೇನಿನಂತೆ ಕೆಲಸ ಮಾಡಬೇಕು. ನಾನು ಬಿಜೆಪಿ ಕಾರ್ಯಕರ್ತರಿಗೆ ಕೊಡುವ ಗೌರವವನ್ನೇ ಜೆಡಿಎಸ್‌ ಕಾರ್ಯಕರ್ತರಿಗೂ ನೀಡುತ್ತೇನೆ. ಎರಡೂ ಪಕ್ಷಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಭೆಗಳನ್ನು ನಡೆಸಬೇಕು. ಕಾಂಗ್ರೆಸ್‌ಗೆ ವಿರೋಧವಾಗಿಯೇ ಜನತಾದಳ ಸೃಷ್ಟಿಯಾಗಿತ್ತು. ಆದ್ದರಿಂದ ಒಂದೇ ಕುಟುಂಬದ ಸದಸ್ಯರಾಗಿ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಪಿಳ್ಳಮುನಿಸ್ವಾಮಿ, ಜಿ.ಚಂದ್ರಣ್ಣ, ನಾಗರಾಜು, ಬೆಂಗಳೂರು ಗ್ರಾಮಾಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ, ಮಾಜಿ ಎಂಎಲ್ಸಿ ಇ.ಕೃಷ್ಣಪ್ಪ, ದೇವನಹಳ್ಳಿ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಮುನೇಗೌಡ, ಅಪ್ಪಯ್ಯಣ್ಣ, ನಾಗೇಶ್, ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

20 minutes ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

11 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

12 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

12 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

15 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

18 hours ago